3:01 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕದ್ರಿ ಪೊಲೀಸರಿಂದ ವಿನೂತನ ಕಾರ್ಯಕ್ರಮ: ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ; ಸಂಚಾರಿ ಠಾಣಾಧಿಕಾರಿ ಸಾರಥ್ಯ

13/08/2023, 22:36

ಮಂಗಳೂರು(reporterkarnataka.com):ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತು ಹಾಗೂ ಚಾಲನ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಇದು ನಡೆದದ್ದು ನಗರದ ಸರ್ಕ್ಯುಟ್ ಹೌಸ್ ಸಮೀಪದ ಕದ್ರಿ ಠಾಣೆಯ ಎದುರುಗಡೆ.
ಇದರ ಸಾರಥ್ಯ ಕದ್ರಿ ಸಂಚಾರಿ ಠಾಣಾಧಿಕಾರಿ ಗೋಪಾಲಕೃಷ್ಣ ಭಟ್ ಅವರದ್ದು.


ಇತ್ತೀಚಿನ ದಿನಗಳಲ್ಲಿ ಅಜಾಗರೂಕತೆ ವಾಹನ ಚಲಾವಣೆಯಿಂದ ಸಾರ್ವಜನಿಕರು ಮೃತ ಪಟ್ಟಿದ್ದು, ಜಾಗೃತಿ ಮೂಡಿಸುವ ಸಲುವಾಗಿ, ಬೈಕ್ ಸವಾರರು ಫುಲ್ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು. ಟೋಪಿ ತರಹದ ಹೆಲ್ಮೆಟ್ ಕಾನೂನು ಬಾಹಿರವಾಗಿದ್ದು, ಐಎಸ್ ಐ ಮಾರ್ಕ್ ಅಥವಾ ತಲೆಯಿಂದ ಕುತ್ತಿಗೆ ಭಾಗದವರೆಗೂ ಮುಚ್ಚುವ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿಬೇಕೆಂದು ರಸ್ತೆಯಲ್ಲೇ ವಾಹನ ಸವಾರರಿಗೆ ಹೆಲ್ಮೆಟ್ ಡೆಮೋ ನೀಡಿ, ತಮ್ಮ ಮಕ್ಕಳ ಹಾಗೂ ತಮ್ಮ ಜೀವವನ್ನು ಉಳಿಸಲು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು