5:24 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕದ್ರಿ ಪೊಲೀಸರಿಂದ ವಿನೂತನ ಕಾರ್ಯಕ್ರಮ: ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ; ಸಂಚಾರಿ ಠಾಣಾಧಿಕಾರಿ ಸಾರಥ್ಯ

13/08/2023, 22:36

ಮಂಗಳೂರು(reporterkarnataka.com):ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತು ಹಾಗೂ ಚಾಲನ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಇದು ನಡೆದದ್ದು ನಗರದ ಸರ್ಕ್ಯುಟ್ ಹೌಸ್ ಸಮೀಪದ ಕದ್ರಿ ಠಾಣೆಯ ಎದುರುಗಡೆ.
ಇದರ ಸಾರಥ್ಯ ಕದ್ರಿ ಸಂಚಾರಿ ಠಾಣಾಧಿಕಾರಿ ಗೋಪಾಲಕೃಷ್ಣ ಭಟ್ ಅವರದ್ದು.


ಇತ್ತೀಚಿನ ದಿನಗಳಲ್ಲಿ ಅಜಾಗರೂಕತೆ ವಾಹನ ಚಲಾವಣೆಯಿಂದ ಸಾರ್ವಜನಿಕರು ಮೃತ ಪಟ್ಟಿದ್ದು, ಜಾಗೃತಿ ಮೂಡಿಸುವ ಸಲುವಾಗಿ, ಬೈಕ್ ಸವಾರರು ಫುಲ್ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು. ಟೋಪಿ ತರಹದ ಹೆಲ್ಮೆಟ್ ಕಾನೂನು ಬಾಹಿರವಾಗಿದ್ದು, ಐಎಸ್ ಐ ಮಾರ್ಕ್ ಅಥವಾ ತಲೆಯಿಂದ ಕುತ್ತಿಗೆ ಭಾಗದವರೆಗೂ ಮುಚ್ಚುವ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿಬೇಕೆಂದು ರಸ್ತೆಯಲ್ಲೇ ವಾಹನ ಸವಾರರಿಗೆ ಹೆಲ್ಮೆಟ್ ಡೆಮೋ ನೀಡಿ, ತಮ್ಮ ಮಕ್ಕಳ ಹಾಗೂ ತಮ್ಮ ಜೀವವನ್ನು ಉಳಿಸಲು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು