9:13 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕದ್ರಿ ಪೊಲೀಸರಿಂದ ವಿನೂತನ ಕಾರ್ಯಕ್ರಮ: ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ; ಸಂಚಾರಿ ಠಾಣಾಧಿಕಾರಿ ಸಾರಥ್ಯ

13/08/2023, 22:36

ಮಂಗಳೂರು(reporterkarnataka.com):ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತು ಹಾಗೂ ಚಾಲನ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಇದು ನಡೆದದ್ದು ನಗರದ ಸರ್ಕ್ಯುಟ್ ಹೌಸ್ ಸಮೀಪದ ಕದ್ರಿ ಠಾಣೆಯ ಎದುರುಗಡೆ.
ಇದರ ಸಾರಥ್ಯ ಕದ್ರಿ ಸಂಚಾರಿ ಠಾಣಾಧಿಕಾರಿ ಗೋಪಾಲಕೃಷ್ಣ ಭಟ್ ಅವರದ್ದು.


ಇತ್ತೀಚಿನ ದಿನಗಳಲ್ಲಿ ಅಜಾಗರೂಕತೆ ವಾಹನ ಚಲಾವಣೆಯಿಂದ ಸಾರ್ವಜನಿಕರು ಮೃತ ಪಟ್ಟಿದ್ದು, ಜಾಗೃತಿ ಮೂಡಿಸುವ ಸಲುವಾಗಿ, ಬೈಕ್ ಸವಾರರು ಫುಲ್ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು. ಟೋಪಿ ತರಹದ ಹೆಲ್ಮೆಟ್ ಕಾನೂನು ಬಾಹಿರವಾಗಿದ್ದು, ಐಎಸ್ ಐ ಮಾರ್ಕ್ ಅಥವಾ ತಲೆಯಿಂದ ಕುತ್ತಿಗೆ ಭಾಗದವರೆಗೂ ಮುಚ್ಚುವ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿಬೇಕೆಂದು ರಸ್ತೆಯಲ್ಲೇ ವಾಹನ ಸವಾರರಿಗೆ ಹೆಲ್ಮೆಟ್ ಡೆಮೋ ನೀಡಿ, ತಮ್ಮ ಮಕ್ಕಳ ಹಾಗೂ ತಮ್ಮ ಜೀವವನ್ನು ಉಳಿಸಲು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು