4:31 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ. ನಾರಾಯಣ ಆಯ್ಜೆ

04/12/2022, 14:49

ಮಂಗಳೂರು(reporterkarnataka.com): ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ಆಶ್ರಯದಲ್ಲಿ ಡಿಸೆಂಬರ್ 6ರಂದು ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ 73ನೇ ಜನುಮ ಜಯಂತಿಯ ಪ್ರಯುಕ್ತ
ಕದ್ರಿ ಸಂಗೀತ ಸೌರಭ 2022 ಹಮ್ಮಿಕೊಳ್ಳಲಾಗಿದ್ದು, ಈ ಬಾರಿಯ ಕದ್ರಿ ಸಂಗೀತ ಸೌರಭ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ. ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.

ಮೂಡಬಿದ್ರೆಯಲ್ಲಿ ಜನಿಸಿದ ಎಂ. ನಾರಾಯಣ ಅವರು ಒಬ್ಬ ಅಪ್ರತಿಮ ಕಲಾವಿದರು. ಪ್ರಸ್ತುತ ಸುರತ್ಕಲ್ ನ ಶ್ರೀಗಣೇಶ್ ಸಂಗೀತ ಮತ್ತು ನೃತ್ಯ ಕಲಾ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ಸಂಗೀತ ಪ್ರಾದ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಣವನ್ನು ನೀಡುತ್ತಿದ್ದಾರೆ.

ಓರ್ವ ಖ್ಯಾತ ಸಂಗೀತ ರಚನಕಾರರಾಗಿರುವ ಇವರು ನಾರಾಯಣದಾಸ ನಾಮಾಂಕಿತದಲ್ಲಿ ಈವರೆಗೆ ವಿವಿಧ ರಾಗ ತಾಳಗಳಲ್ಲಿ 25 ಜತಿ ಸ್ವರಗಳು, 75 ತಾಣ ವರ್ಣಗಳು, 4 ಸ್ವರ ಜತಿಗಳು, 200 ಕೃತಿಗಳು ಹಾಗು 15 ತಿಲ್ಲಾನಗಳನ್ನು ಕನ್ನಡ ತೆಲುಗು ಹಾಗೂ ಸಂಸ್ಕೃತದಲ್ಲಿ ರಚಿಸಿದ್ದಾರೆ.
ಅಂತೆಯೇ 72 ಮೇಳಕರ್ತ ರಾಗಗಳಲ್ಲೂ ಕೂಡ ಕೃತಿ ರಚನೆ ಮಾಡಿರುವ ಕರ್ನಾಟಕದ ಕೆಲವೇ ಕೆಲವು ರಚನಕಾರರಲ್ಲಿ ಇವರು ಒಬ್ಬರು.

ಅವರು ಶ್ರೀಮಹಾಗಣಪತಿಯ ಮೇಲೆ 47 ಕೃತಿಗಳ ರಚನೆ ಮಾಡಿದ್ದಾರೆ. ಅವರ ಅಪರಿಮಿತ ಸಾಧನೆಯನ್ನು ಗುರುತಿಸಿ ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ಕದ್ರಿ ಸಂಗೀತ ಸೌರಭ 2022 ರ ಜೀವಮಾನ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು 50,000 ರೂ‌ ನಗದು ಹಾಗೂ ಬೆಳ್ಳಿಯ ಫಲಕ ಹೊಂದಿದೆ.
ಡಿಸೆಂಬರ್ 6 2022 ರಂದು ಸಂಜೆ 530 ಕ್ಕೆ ಮಂಗಳೂರು ಉರ್ವ ಸ್ಟೋರ್ ಹತ್ತಿರ ಇರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು