6:47 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕದ್ರಿ ಶ್ರೀ ಕಾಲಭೈರವ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಂಪನ್ನ: ವಿವಿಧ ವರ್ಣದ ಶಿವಲಿಂಗ ಪ್ರತಿಷ್ಢಾಪನೆ

06/02/2023, 23:00

ಮಂಗಳೂರು(reporterkarnataka.com): ರಾಜರಾಜೇಶ್ವರ ತಪೋನಿಧಿ ಶ್ರೀ 1008_ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದವಿದ್ವಾನ್ ದೇರೆಬೈಲು ವಿಠಲ್‌ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದಿರೆಯ ಪಟ್ಟದ ಸಿದ್ಧ ಪೀಠದೊಡೆಯ ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಾಥ ಪಂಥದ ಸಂಪ್ರದಾಯದಂತೆ ವೈಧಿಕ ವಿಧಿ ವಿಧಾನಗಳೊಂದಿಗೆ ಇಂದು ವಿದ್ಯುಕ್ತವಾಗಿ ನೆರವೇರಿತು.

ಇದೇ ವೇಳೆ ಶ್ರೀಕಾಲ ಭೈರವ ದೇವರಿಗೆ ರೋಟ್ ಪೂಜೆ, ಪ್ರಸನ್ನ ಪೂಜೆ ನಡೆಯಿತು. ಮಧ್ಯ ಪ್ರದೇಶ, ರಾಜಸ್ಥಾನಗಳಿಂದ ತರಿಸಲಾದ ಅಮೂಲ್ಯ ಶಿಲೆಗಳಲ್ಲಿ ರೂಪಿಸಲಾದ ವಿವಿಧ ವರ್ಣದ ಶಿವಲಿಂಗಗಳ ಪ್ರತಿಷ್ಠಾಪನೆಯೂ ಇದೇ ಸಂದರ್ಭ ನಡೆಯಿತು.

ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ, ಗುಜರಾತ್, ಕರ್ನಾಟಕ ಸೇರಿದಂತೆ ವಿವಿದೆಡೆಗಳಿಂದ ಆಗಮಿಸಿದ ಸಾಧು ಸಂತರು ಕಾಲಭೈರವ ಭಕ್ತರು ಸಹಿತ ಸ್ಥಳೀಯರು, ಜೋಗಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ರಾಜಸ್ಥಾನದ ಭಕ್ತರು ಢೋಲ್ ತಾಲಿ ನೃತ್ಯ ಮಾಡಿ ಸಂಭ್ರಮಿಸಿದರು. ಕರ್ನಾಟಕದ ಮಾರ್ವಾಡಿಗಳು ಶ್ವೇತಾಂಬರ ಜೈನರಾದರೂ ಅವರು ಭೈರವನ ಆರಾಧಕರು. ರಾಜಸ್ಥಾನದಲ್ಲಿರುವ ಭೈರೂನಾಥ ಇವರ ಮನೆದೈವ. ಕಾಲಭೈರವ ಬ್ರಹ್ಮಕಲಶೋತ್ಸವದಲ್ಲಿ ಅವರು ಸಂಭ್ರಮದಿಂದ ಪಾಲ್ಗೊಂಡು ನೃತ್ಯ ಮಾಡುತ್ತಿದ್ದುದಕ್ಕೆ ಇದು ಒಂದು ಕಾರಣ.
ಕದ್ರಿ ಮಠವು ಹಿಂದೆ ಮೋಹನನಾಥರ ಕಾಲದಲ್ಲಿ ಒಮ್ಮೆ ಜೀರ್ಣೋದ್ಧಾರಗೊಂಡಿತ್ತು. ಈಗ ಕಾಲಭೈರವ ದೇವಸ್ಥಾನ ಜೀರ್ಣೋದ್ಧಾರಗೊಂಡು ಹೊಸ ರೂಪ ಪಡೆದಿದೆ. ನಾಯಿಯೊಂದಿಗೆ ಭೈರವನಿರುವ ವಿಗ್ರಹವನ್ನು ಪ್ರತಿಷ್ಠೆಗಾಗಿ ಮಧ್ಯ ಪ್ರದೇಶದಲ್ಲಿ ರೂಪಿಸಿ ತರಿಸಲಾಗಿದೆ.

ಕದ್ರಿ ಮಠದ ಅಧಿಪತಿಯಾಗಿದ್ದ ಭವಾನಿ ನಾಥರು ಪ್ರಸಿದ್ದಿ ರಸ ವೈದ್ಯರಾಗಿದ್ದರು ಮತ್ತು ಅವರು ತಾಮ್ರದ ಕಾಸನ್ನು ಚಿನ್ನವಾಗಿಸುತ್ತಿದ್ದರೆಂಬ ಪ್ರತೀತಿ ಇದೆ. ಪ್ರಸ್ತುತ ಶ್ರೀ ರಾಜಯೋಗಿ ನಿರ್ಮಲ್ ನಾಥ ಜೀ ಮಹಾರಾಜ್ ಅವರು ಕದ್ರಿ ಮಠದ ಪೀಠಾಧಿಪತಿಯಾಗಿದ್ದಾರೆ.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಚ್. ಕೆ. ಪುರುಷೋತ್ತಮ ಜೋಗಿ, ಪ್ರಧಾನ ಕಾರ್ಯದರ್ಶಿ ಸತೀಶ್ ಜೋಗಿ ಮಾಲೆಮಾರ್, ಪ್ರಧಾನ ಸಲಹೆಗಾರರಾದ ಹರಿನಾಥ್ ಜೋಗಿ, ಕಿರಣ್ ಕುಮಾರ್ ಜೋಗಿ, ಪ್ರಧಾನ ಆರ್ಚಕ ಉಮೇಶ್‌ನಾಥ್, ಡಾ. ಪಿ. ಕೇಶವನಾಥ್, ಗಂಗಾಧರ್ ಬಿ., ಶಿವರಾಮ ಜೋಗಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು