7:49 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್

26/07/2021, 19:18

ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,

ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ರಾಜಕೀಯ ರಹಿತವಾಗಿ ಗೌರವಿಸುವ ಕೆಲಸವಾಗಬೇಕು. ಮಾತೃಭೂಮಿಯ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. 

ಭಾರತ ಎಂದೆಂದಿಗೂ ಶಾಂತಿಯನ್ನು ಬಯಸುವ ರಾಷ್ಟ್ರ. ಆದರೆ ಅದನ್ನು ಅಸಹಾಯತೆ ಎಂದು ಭಾವಿಸಿದರೆ ಕಾರ್ಗಿಲ್ ಕದನ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಮೇಲಿನ ದಾಳಿಯ ಮೂಲಕ ಸೇನಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಡುವಲ್ಲಿ ಭಾರತೀಯ ಸೇನೆ ಸಮರ್ಥವಾಗಿದೆ ಎಂದರು. ಕದ್ರಿಯ ಯೋಧ ಸ್ಮಾರಕದ ಅಭಿವೃದ್ಧಿಗೆ 25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು. ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ, ಸೌಂಡ್ ಸಿಸ್ಟಮ್, ಕಾರಂಜಿಗಳ ಅಭಿವೃದ್ಧಿ ಸೇರಿದಂತೆ ಯೋಧ ಸ್ಮಾರಕದ ಸಮಗ್ರ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಕಿಲಾ ಕಾವಾ, ಬಿಜೆಪಿ ಮುಖಂಡರಾದ ರೂಪಾ.ಡಿ ಬಂಗೇರ, ಪೂಜಾ ಪೈ, ಪ್ರಶಾಂತ್ ಪೈ, ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ, ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ,ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಕ್ರಮ್ ದತ್ತ, ಹಿರಿಯ ಅಧಿಕಾರಿಗಳಾದ  ಬ್ರಿಗೇಡಿಯರ್ ಐ.ಎನ್ ರೈ, ಕರ್ನಲ್ ಎನ್.ಶರತ್ ಭಂಡಾರಿ, ಕರ್ನಲ್ ಜಯಚಂದ್ರನ್, ರೋಟರಿ ಪ್ರಮುಖರಾದ ಜೆ.ಪಿ ರೈ, ಲಯನ್ಸ್ ಪ್ರಮುಖರಾದ ವಿಜಯ ವಿಷ್ಣು ಮಯ್ಯ, ರೋಟರಿ ಸಂಸ್ಥೆಯ ಪ್ರಮುಖರು, ಲಯನ್ಸ್ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು