2:16 PM Sunday2 - February 2025
ಬ್ರೇಕಿಂಗ್ ನ್ಯೂಸ್
ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ;… ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ… ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ;… ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ… ಆರ್ಥಿಕ ಸಂಕಷ್ಟದಿಂದ ವೈಜಾಗ್ ಸ್ಟೀಲ್ ಕಾರ್ಖಾನೆ ಪಾರು: 11,440 ಕೋಟಿ ರೂ. ಪುನಶ್ಚೇತನ… ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ… ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಕಡೂರು: ಬೋರ್ ವೆಲ್ ಗೆ ವಿದ್ಯುತ್‌ ಲೈನ್ ಎಳೆಯುವ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ

02/02/2025, 13:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋರ್ ವೆಲ್ ಗೆ ವಿದ್ಯುತ್‌ ಲೈನ್ ವಿಚಾರಕ್ಕೆ ಸಂಬಂಧ
ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಕಲ್ಲೇಶಪ್ಪ (55) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತು ವಡೇರಹಳ್ಳಿ ಪಕ್ಕದ ಆನಂದಪುರ ಗ್ರಾಮದ ಮೂವರ ಮೇಲೆ ದೂರು ದಾಖಲಿಸಲಾಗಿದೆ.
ಟಿಸಿಯಿಂದ ವಿದ್ಯುತ್ ಲೈನ್ ಎಳೆದುಕೊಂಡು ಬೋರ್ ಮೂಲಕ ತೋಟಕ್ಕೆ ನೀರಾಯಿಸ್ತಿದ್ರು. ಅದೇ ಟಿಸಿಯಿಂದ ಮತ್ತೊಂದು ಬೋರ್‌ ಗೆ ಕರೆಂಟ್ ಎಳೆದುಕೊಳ್ಳಲು ಯತ್ನ ನಡೆದಿತ್ತು. ಒಂದೇ ತೋಟದಲ್ಲಿ 2 ಬೋರ್ ಕಲ್ಲೇಶಪ್ಪ ತೆಗೆಸಿದ್ದರು. ಬೇಡ ಅಂದಾಗ ಮಾತಿಗೆ ಮಾತು ಬೆಳೆದು ಗಲಾಟೆ, ಕೊಲೆಯಲ್ಲಿ ಅಂತ್ಯಗೊಂಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಕಲ್ಲೇಸಪ್ಪ ಅವರನ್ನು
ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ
ಚಿಕಿತ್ಸೆ ಫಲಕಾರಿಯಾಗದೆ ಕಲ್ಲೇಶಪ್ಪ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಅನಂತಪುರ ಗ್ರಾಮದ ನಾಗರಾಜಪ್ಪ, ಲೋಹಿತ್ ಹಾಗೂ ಗಂಗಾಧರಪ್ಪ ಮೇಲೆ
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು