6:15 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಕಡೂರು: ಬೋರ್ ವೆಲ್ ಗೆ ವಿದ್ಯುತ್‌ ಲೈನ್ ಎಳೆಯುವ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ

02/02/2025, 13:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋರ್ ವೆಲ್ ಗೆ ವಿದ್ಯುತ್‌ ಲೈನ್ ವಿಚಾರಕ್ಕೆ ಸಂಬಂಧ
ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಕಲ್ಲೇಶಪ್ಪ (55) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತು ವಡೇರಹಳ್ಳಿ ಪಕ್ಕದ ಆನಂದಪುರ ಗ್ರಾಮದ ಮೂವರ ಮೇಲೆ ದೂರು ದಾಖಲಿಸಲಾಗಿದೆ.
ಟಿಸಿಯಿಂದ ವಿದ್ಯುತ್ ಲೈನ್ ಎಳೆದುಕೊಂಡು ಬೋರ್ ಮೂಲಕ ತೋಟಕ್ಕೆ ನೀರಾಯಿಸ್ತಿದ್ರು. ಅದೇ ಟಿಸಿಯಿಂದ ಮತ್ತೊಂದು ಬೋರ್‌ ಗೆ ಕರೆಂಟ್ ಎಳೆದುಕೊಳ್ಳಲು ಯತ್ನ ನಡೆದಿತ್ತು. ಒಂದೇ ತೋಟದಲ್ಲಿ 2 ಬೋರ್ ಕಲ್ಲೇಶಪ್ಪ ತೆಗೆಸಿದ್ದರು. ಬೇಡ ಅಂದಾಗ ಮಾತಿಗೆ ಮಾತು ಬೆಳೆದು ಗಲಾಟೆ, ಕೊಲೆಯಲ್ಲಿ ಅಂತ್ಯಗೊಂಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಕಲ್ಲೇಸಪ್ಪ ಅವರನ್ನು
ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ
ಚಿಕಿತ್ಸೆ ಫಲಕಾರಿಯಾಗದೆ ಕಲ್ಲೇಶಪ್ಪ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಅನಂತಪುರ ಗ್ರಾಮದ ನಾಗರಾಜಪ್ಪ, ಲೋಹಿತ್ ಹಾಗೂ ಗಂಗಾಧರಪ್ಪ ಮೇಲೆ
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು