3:59 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಕಡೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ: ನೇರಳೆ ಹಣ್ಣು ಕೀಳಲು ಮರ ಏರಿದ ಬಾಲಕ ವಿದ್ಯುತ್ ಶಾಕ್ ಗೆ ಬಲಿ

15/06/2024, 15:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಆಕಾಶ್ (13) ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ.
ಶಾಲೆ ಆವರಣದ ನೇರಳೆ ಮರಕ್ಕೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಮರದಿಂದ ಜಾರಿ ಬೀಳುವಾಗ ವಿದ್ಯುತ್ ತಂತಿ ಹಿಡಿದ ಬಾಲಕ ಆಕಾಶ್ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದಿದ್ದ. ತಕ್ಷಣ ಬಾಲಕನ ಆಸ್ಪತ್ರೆಗೆ ದಾಖಲಿಸಿದರೂ
ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು