12:11 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಡೂರು: ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ ಆರೋಪಿ ಯುವಕನ‌ ಕತ್ತು ಸೀಳಿ ಭೀಕರ ಕೊಲೆ

17/02/2024, 13:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿ ಬಿಡುಗಡೆಗೊಂಡಿದ್ದ
ತುಮಕೂರು ಮೂಲದ ಯುವಕನೊಬ್ಬನನ್ನು ಕಾಫಿನಾಡ ಕಡೂರಿನಲ್ಲಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ.
ದರ್ಶನ್ (21) ಮೃತ ದುರ್ದೈವಿ.
ಕಡೂರು ತಾಲೂಕಿನ ಹುಲಿಗೊಂದಿ ಹೊಸೂರು ಬಳಿ ದುಷ್ಕರ್ಮಿಗಳು
ಯುವಕನ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿದ್ದಾರೆ.

ದರ್ಶನ್ ಅವರು ತುಮಕೂರು ಜಿಲ್ಲೆ ಮಧುಗಿರಿ ಮೂಲದವರು.
ಬೆಂಗಳೂರಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ. ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ.
ಜಾಮೀನು ಸಿಕ್ಕ ಬಳಿಕ ಇಬ್ಬರು ಸ್ನೇಹಿತರ ಜೊತೆ ಕಡೂರಿಗೆ ಬಂದಿದ್ದ ಎನ್ನಲಾಗಿದೆ.
ಕಡೂರಿನ ಮಾಡಾಳು ಗ್ರಾಮದ ತಾತನ ಮನೆಯಲ್ಲಿ ಇದ್ದನು
ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ. ನಿನ್ನೆ ರಾತ್ರಿ ಕಾರಿನಲ್ಲಿ ಬಂದ ಸ್ನೇಹಿತರ ಜೊತೆ ಹೋಗಿದ್ದ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್ ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು.
ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್ ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು.ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಯಾವ ವಿಚಾರಕ್ಕೆ, ಯಾರು ಕೊಲೆಗೈದಿದ್ದಾರೆ ಅನ್ನೋದು ನಿಗೂಢವಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು