3:43 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಾಗವಾಡದ ಬಹು ದಿನಗಳ ಕನಸು ನನಸು: ಸಿವಿಲ್ ಜಡ್ಜ್  ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನೆ

12/07/2021, 08:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡದ ಎಪಿಎಂಸಿ ಆವರಣದಲ್ಲಿ ನೂತನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು

ಬಹುದಿನಗಳಿಂದ ಬೇಡಿಕೆಯಾಗಿ ಉಳಿದಿರುವ ಕಾಗವಾಡದಲ್ಲಿ ಸ್ವತಂತ್ರ್ಯ ನ್ಯಾಯಾಲಯ ಪ್ರಾರಂಭಿಸುವ ಕನಸ್ಸು, ಇಂದು ನನಸಾಗಿದೆ. ರಾಜ್ಯದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ ಹಾಗೂ ಸಚಿನ ಮಗದುಮ ಇವರು ನ್ಯಾಯಾಲಯವನ್ನು ಉದ್ಘಾಟಿಸಿದರು.

ಕಾಗವಾಡದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಮುಖ್ಯ ಉಪಸ್ಥಿತಿಯಲ್ಲಿ ನ್ಯಾಯಾಲಯ ಉದ್ಘಾಟಿಸಿ ಚಾಲನೆ ನೀಡಲಾಯಿತು.

ನ್ಯಾಯಮೂರ್ತಿಗಳಾದ ಅರವಿಂದಕುಮಾರ ನ್ಯಾಯಾಲಯ ಉದ್ಘಾಟಿಸಿದ ಬಳಿಕ ಮಾತನಾಡಿ ಕಾಗವಾಡದಲ್ಲಿ ನ್ಯಾಯಾಲಯ ಪ್ರಾರಂಭಿಸಲು 2017ರಿಂದ ನಾನು ಪ್ರಯತ್ನಿಸುತ್ತಿದ್ದೆ. ಅದು ಈಗ ಕಾಲ ಕೂಡಿ ಬಂದಿದೆ. ಇದನ್ನು ಪ್ರಾರಂಭಿಸಲು ಅಥಣಿ ಶಾಸಕರು ಹಾಗೂ ರಾಜ್ಯದ ಡಿಸಿಎಂ ಲಕ್ಷ್ಮಣ ಸವದಿ, ಕಾಗವಾಡ ಕ್ಷೇತ್ರ ಶಾಸಕರು ಹಾಗೂ ಜವಳಿ ಇಲಾಖೆ ಸಚಿವ ಶ್ರೀಮಂತ ಪಾಟೀಲರ ವಿಶೇಷ ಪ್ರಯತ್ನವಿದೆ. ನ್ಯಾಯವಾದಿಗಳು ಈ ಮೊದಲು ತಮ್ಮ ಕಕ್ಷಿಗಾರರನ್ನು ತೆಗೆದುಕೊಂಡು ಅಥಣಿಗೆ ಹೋಗಬೇಕಾಗಿತ್ತು. ಸೋಮವಾರದಿಂದ ಈ ಭಾಗದ ಎಲ್ಲಾ ದಾವೆಗಳು ಕಾಗವಾಡದಲ್ಲಿ ವರ್ಗಾಯಿಸಿದ್ದು, ಕಾಗವಾಡದ ನ್ಯಾಯಾಧೀಶರಾದ ಚನ್ನಬಸಪ್ಪಾ ಕೋಡಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಎಲ್ಲ ನ್ಯಾಯವಾದಿಗಳು ಕಕ್ಷಿಗಾರರಿಗೆ ಒಳ್ಳೆಯ ನ್ಯಾಯ ಕೊಡಿಸಿ, ಮಾದರಿ ನ್ಯಾಯಾಲಯವಾಗಿ ಮಾಡಿರಿ ಎಂದು ಸಲಹೆ ನೀಡಿದರು.


ನಂತರ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ ನ್ಯಾಯಮೂರ್ತಿಗಳಾದ ಅರವಿಂದಕುಮಾರ ಇವರು ಬೆಳಗಾವಿ ಜಿಲ್ಲೆಯಲ್ಲಿ ತಮ್ಮ ಆಡಳಿತಾತ್ಮಕ ಸೇವೆ ನೀಡಿದ್ದು, ಒಳ್ಳೆ ನ್ಯಾಯಾಧೀಶರೆಂದು ಹೇಳಿ ಅವರ ಕಾರ್ಯಕಲಾಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅದೇ ರೀತಿ ಅಥಣಿ ನ್ಯಾಯವಾದಿಗಳ ಬೇಡಿಕೆಯಂತೆ ಅಥಣಿಯಲ್ಲಿ ಜಿಲ್ಲಾ ನ್ಯಾಯಾಲಯ ಪ್ರಾರಂಭಿಸಬೇಕೆಂದು ಬೇಡಿಕೆಯಿಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು