12:50 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಾಗವಾಡದ ಬಹು ದಿನಗಳ ಕನಸು ನನಸು: ಸಿವಿಲ್ ಜಡ್ಜ್  ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನೆ

12/07/2021, 08:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡದ ಎಪಿಎಂಸಿ ಆವರಣದಲ್ಲಿ ನೂತನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು

ಬಹುದಿನಗಳಿಂದ ಬೇಡಿಕೆಯಾಗಿ ಉಳಿದಿರುವ ಕಾಗವಾಡದಲ್ಲಿ ಸ್ವತಂತ್ರ್ಯ ನ್ಯಾಯಾಲಯ ಪ್ರಾರಂಭಿಸುವ ಕನಸ್ಸು, ಇಂದು ನನಸಾಗಿದೆ. ರಾಜ್ಯದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ ಹಾಗೂ ಸಚಿನ ಮಗದುಮ ಇವರು ನ್ಯಾಯಾಲಯವನ್ನು ಉದ್ಘಾಟಿಸಿದರು.

ಕಾಗವಾಡದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಮುಖ್ಯ ಉಪಸ್ಥಿತಿಯಲ್ಲಿ ನ್ಯಾಯಾಲಯ ಉದ್ಘಾಟಿಸಿ ಚಾಲನೆ ನೀಡಲಾಯಿತು.

ನ್ಯಾಯಮೂರ್ತಿಗಳಾದ ಅರವಿಂದಕುಮಾರ ನ್ಯಾಯಾಲಯ ಉದ್ಘಾಟಿಸಿದ ಬಳಿಕ ಮಾತನಾಡಿ ಕಾಗವಾಡದಲ್ಲಿ ನ್ಯಾಯಾಲಯ ಪ್ರಾರಂಭಿಸಲು 2017ರಿಂದ ನಾನು ಪ್ರಯತ್ನಿಸುತ್ತಿದ್ದೆ. ಅದು ಈಗ ಕಾಲ ಕೂಡಿ ಬಂದಿದೆ. ಇದನ್ನು ಪ್ರಾರಂಭಿಸಲು ಅಥಣಿ ಶಾಸಕರು ಹಾಗೂ ರಾಜ್ಯದ ಡಿಸಿಎಂ ಲಕ್ಷ್ಮಣ ಸವದಿ, ಕಾಗವಾಡ ಕ್ಷೇತ್ರ ಶಾಸಕರು ಹಾಗೂ ಜವಳಿ ಇಲಾಖೆ ಸಚಿವ ಶ್ರೀಮಂತ ಪಾಟೀಲರ ವಿಶೇಷ ಪ್ರಯತ್ನವಿದೆ. ನ್ಯಾಯವಾದಿಗಳು ಈ ಮೊದಲು ತಮ್ಮ ಕಕ್ಷಿಗಾರರನ್ನು ತೆಗೆದುಕೊಂಡು ಅಥಣಿಗೆ ಹೋಗಬೇಕಾಗಿತ್ತು. ಸೋಮವಾರದಿಂದ ಈ ಭಾಗದ ಎಲ್ಲಾ ದಾವೆಗಳು ಕಾಗವಾಡದಲ್ಲಿ ವರ್ಗಾಯಿಸಿದ್ದು, ಕಾಗವಾಡದ ನ್ಯಾಯಾಧೀಶರಾದ ಚನ್ನಬಸಪ್ಪಾ ಕೋಡಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಎಲ್ಲ ನ್ಯಾಯವಾದಿಗಳು ಕಕ್ಷಿಗಾರರಿಗೆ ಒಳ್ಳೆಯ ನ್ಯಾಯ ಕೊಡಿಸಿ, ಮಾದರಿ ನ್ಯಾಯಾಲಯವಾಗಿ ಮಾಡಿರಿ ಎಂದು ಸಲಹೆ ನೀಡಿದರು.


ನಂತರ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ ನ್ಯಾಯಮೂರ್ತಿಗಳಾದ ಅರವಿಂದಕುಮಾರ ಇವರು ಬೆಳಗಾವಿ ಜಿಲ್ಲೆಯಲ್ಲಿ ತಮ್ಮ ಆಡಳಿತಾತ್ಮಕ ಸೇವೆ ನೀಡಿದ್ದು, ಒಳ್ಳೆ ನ್ಯಾಯಾಧೀಶರೆಂದು ಹೇಳಿ ಅವರ ಕಾರ್ಯಕಲಾಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅದೇ ರೀತಿ ಅಥಣಿ ನ್ಯಾಯವಾದಿಗಳ ಬೇಡಿಕೆಯಂತೆ ಅಥಣಿಯಲ್ಲಿ ಜಿಲ್ಲಾ ನ್ಯಾಯಾಲಯ ಪ್ರಾರಂಭಿಸಬೇಕೆಂದು ಬೇಡಿಕೆಯಿಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು