7:28 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ

16/06/2021, 10:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇಡಿಕೆ ಪೂರೈಸಿದಂತಾಗಿದೆ.

ಈ ಮುನ್ನ ನದಿ ಪಾತ್ರದ ರೈತರಿಗೆ ದಿನಕ್ಕೆ ಬರೇ 8 ತಾಸು ವಿದ್ಯುತ್ ಪೂರೈಸಲಾಗುತ್ತಿತ್ತು. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಬಹಳಷ್ಟು ತೊಂದರೆಯಾಗುತ್ತಿತ್ತು. ರೈತರು ಈ ವಿಷಯನ್ನು ಸಚಿವ ಶ್ರೀಮಂತ ಪಾಟೀಲ್  ಗಮನಕ್ಕೆ ತಂದಿದ್ದರು.

ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಕಚೇರಿಗೆ ಕರೆದು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ

ಚರ್ಚಿಸಿ ದಿನದ 20 ತಾಸು ಕಾಲ ವಿದ್ಯುತ್ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಪರಿಣಾಮ ಇದೀಗ

ದಿನದ 20 ಗಂಟೆಗಳ ಕಾಲ ಡೆಲ್ಟಾ ರೀತಿಯಲ್ಲಿ ವಿದ್ಯುತ್ ಪ್ರಾರಂಭಿಸಲಾಗಿದೆ. ಇದರಿಂದ

ಈಗಾಗಲೇ ಹಲವಾರು ರೈತರು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಖುಷಿಯಲ್ಲಿ

ವಿವಿಧ ನೀರಾವರಿ ಸಂಘಗಳ ಸದಸ್ಯರು, ಸಮಸ್ತ ರೈತರು  ಕಾಗವಾಡದ ಪ್ರವಾಸಿ ಮಂದಿರದಲ್ಲಿ 

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ  ಶ್ರೀಮಂತ ಪಾಟೀಲ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ  ಸಚಿವರು ಮಾತನಾಡಿ, ನಮ್ಮ ಕ್ಷೇತ್ರದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ತೊಂದರೆಯಾಗಿತ್ತು, ಇದನ್ನು ಮನಗಂಡು ರೈತರಿಗೆ ಅನುಕೂಲವಾಗಲಿ ಎಂದು ಡೆಲ್ಟಾ ರೀತಿಯಲ್ಲಿ ದಿನದ 20 ಗಂಟೆಗಳ ಕಾಲ ಹೆಚ್ಚಿನ ವಿದ್ಯುತ್ ನೀಡಲಾಗಿದೆ. ಎಲ್ಲ ರೈತರು ಇದರ ಉಪಯೋಗ ಪಡೆದು ಉತ್ತಮವಾಗಿ ಬೆಳೆ ಬೆಳೆಯಿರಿ ಎಂದು ರೈತರು ಹಾಗೂ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.

ಸ್ಥಳೀಯ ಮುಖಂಡರು, ವಿವಿಧ ಗ್ರಾಮದ ರೈತರು, ಹಲವಾರು ನೀರಾವರಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು