10:54 PM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ

16/06/2021, 10:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇಡಿಕೆ ಪೂರೈಸಿದಂತಾಗಿದೆ.

ಈ ಮುನ್ನ ನದಿ ಪಾತ್ರದ ರೈತರಿಗೆ ದಿನಕ್ಕೆ ಬರೇ 8 ತಾಸು ವಿದ್ಯುತ್ ಪೂರೈಸಲಾಗುತ್ತಿತ್ತು. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಬಹಳಷ್ಟು ತೊಂದರೆಯಾಗುತ್ತಿತ್ತು. ರೈತರು ಈ ವಿಷಯನ್ನು ಸಚಿವ ಶ್ರೀಮಂತ ಪಾಟೀಲ್  ಗಮನಕ್ಕೆ ತಂದಿದ್ದರು.

ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಕಚೇರಿಗೆ ಕರೆದು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ

ಚರ್ಚಿಸಿ ದಿನದ 20 ತಾಸು ಕಾಲ ವಿದ್ಯುತ್ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಪರಿಣಾಮ ಇದೀಗ

ದಿನದ 20 ಗಂಟೆಗಳ ಕಾಲ ಡೆಲ್ಟಾ ರೀತಿಯಲ್ಲಿ ವಿದ್ಯುತ್ ಪ್ರಾರಂಭಿಸಲಾಗಿದೆ. ಇದರಿಂದ

ಈಗಾಗಲೇ ಹಲವಾರು ರೈತರು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಖುಷಿಯಲ್ಲಿ

ವಿವಿಧ ನೀರಾವರಿ ಸಂಘಗಳ ಸದಸ್ಯರು, ಸಮಸ್ತ ರೈತರು  ಕಾಗವಾಡದ ಪ್ರವಾಸಿ ಮಂದಿರದಲ್ಲಿ 

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ  ಶ್ರೀಮಂತ ಪಾಟೀಲ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ  ಸಚಿವರು ಮಾತನಾಡಿ, ನಮ್ಮ ಕ್ಷೇತ್ರದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ತೊಂದರೆಯಾಗಿತ್ತು, ಇದನ್ನು ಮನಗಂಡು ರೈತರಿಗೆ ಅನುಕೂಲವಾಗಲಿ ಎಂದು ಡೆಲ್ಟಾ ರೀತಿಯಲ್ಲಿ ದಿನದ 20 ಗಂಟೆಗಳ ಕಾಲ ಹೆಚ್ಚಿನ ವಿದ್ಯುತ್ ನೀಡಲಾಗಿದೆ. ಎಲ್ಲ ರೈತರು ಇದರ ಉಪಯೋಗ ಪಡೆದು ಉತ್ತಮವಾಗಿ ಬೆಳೆ ಬೆಳೆಯಿರಿ ಎಂದು ರೈತರು ಹಾಗೂ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.

ಸ್ಥಳೀಯ ಮುಖಂಡರು, ವಿವಿಧ ಗ್ರಾಮದ ರೈತರು, ಹಲವಾರು ನೀರಾವರಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು