4:42 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ

07/08/2025, 11:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ
ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು.
ದಲಿತ ಸಂಘರ್ಷ ಸಮಿತಿ, ಪ್ರಗತಿಪರರು, ರೈತ ಸಂಘದಿಂದ ಪ್ರಾಯಶ್ಚಿತ್ತ ಮೌನ ಪ್ರತಿಭಟನೆ ಜರುಗಿತು.
ಶಾಸಕಿ ನಯನಾ ಮೋಟಮ್ಮ ಗೆಲುವಿಗೆ ಶ್ರಮಿಸಿ ತಪ್ಪು ಮಾಡಿದ್ದೇವೆಂದು ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು.
ಚಿಕ್ಕಮಗಳೂರು ನಗರದ ಕೋರ್ಟ್ ಆವರಣದಲ್ಲಿರುವ
ಗಾಂಧಿ ಪ್ರತಿಮೆ ಎದುರು ದಲಿತ ಸಂಘ, ಪ್ರಗತಿಪರರು, ರೈತರು ಮೌನ ಧರಣಿ ನಡೆಸಿದರು.
ಕೇಸರಿ ಶಾಲು ತೊಟ್ಟು ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ನಯನಾ ಮೋಟಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಸರಿ ಶಾಲು ತೊಟ್ಟು 3 ವರ್ಷ ಆದ ಮೇಲೆ ಬಿಜೆಪಿ ಹೋಗ್ತೀನೋ… ಕಾಂಗ್ರೆಸ್ಸಲ್ಲೇ ಇರ್ತಿನೋ ಗೊತ್ತಿಲ್ಲ ಎಂದಿದ್ದ ನಯನಾ ಮೋಟಮ್ಮ.


ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದರು.
ಅನ್ಯ ಧರ್ಮದ ಮೇಲೆ ದ್ವೇಷ ಕಾರುವ ಪ್ರಮೋದ್ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದ್ದಾರೆ.
48ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರೋ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಕಿಡಿ ಕಾರಿದ್ದಾರೆ.
ಇಂತವರ ಗೆಲುವಿಗೆ ಶ್ರಮಿಸಿದ್ವಲ್ಲಾ ಅಂತ ಗಾಂಧಿ ಪ್ರತಿಮೆ ಎದುರು ಪ್ರಾಯಶ್ಚಿತ್ತ ಮಾಡಿಕೊಂಡರು.
ಅವರಿಗೆ ಮತ ಹಾಕಿ, ಹಾಕಿಸಿ ತಪ್ಪು ಮಾಡಿದ್ದೇವೆಂದು ನೊಂದು ಗಾಂಧಿ ಎದುರು ಪ್ರಾಯಶ್ಚಿತ್ತ ಮೌನ ಧರಣಿ ನಡೆಸಿದರು.
ನಯನಾ ಮೋಟಮ್ಮ ಮಾಜಿ‌ ಸಚಿವೆ ಮೋಟಮ್ಮ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು