5:56 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ

07/08/2025, 11:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ
ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು.
ದಲಿತ ಸಂಘರ್ಷ ಸಮಿತಿ, ಪ್ರಗತಿಪರರು, ರೈತ ಸಂಘದಿಂದ ಪ್ರಾಯಶ್ಚಿತ್ತ ಮೌನ ಪ್ರತಿಭಟನೆ ಜರುಗಿತು.
ಶಾಸಕಿ ನಯನಾ ಮೋಟಮ್ಮ ಗೆಲುವಿಗೆ ಶ್ರಮಿಸಿ ತಪ್ಪು ಮಾಡಿದ್ದೇವೆಂದು ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು.
ಚಿಕ್ಕಮಗಳೂರು ನಗರದ ಕೋರ್ಟ್ ಆವರಣದಲ್ಲಿರುವ
ಗಾಂಧಿ ಪ್ರತಿಮೆ ಎದುರು ದಲಿತ ಸಂಘ, ಪ್ರಗತಿಪರರು, ರೈತರು ಮೌನ ಧರಣಿ ನಡೆಸಿದರು.
ಕೇಸರಿ ಶಾಲು ತೊಟ್ಟು ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ನಯನಾ ಮೋಟಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಸರಿ ಶಾಲು ತೊಟ್ಟು 3 ವರ್ಷ ಆದ ಮೇಲೆ ಬಿಜೆಪಿ ಹೋಗ್ತೀನೋ… ಕಾಂಗ್ರೆಸ್ಸಲ್ಲೇ ಇರ್ತಿನೋ ಗೊತ್ತಿಲ್ಲ ಎಂದಿದ್ದ ನಯನಾ ಮೋಟಮ್ಮ.


ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದರು.
ಅನ್ಯ ಧರ್ಮದ ಮೇಲೆ ದ್ವೇಷ ಕಾರುವ ಪ್ರಮೋದ್ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದ್ದಾರೆ.
48ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರೋ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಕಿಡಿ ಕಾರಿದ್ದಾರೆ.
ಇಂತವರ ಗೆಲುವಿಗೆ ಶ್ರಮಿಸಿದ್ವಲ್ಲಾ ಅಂತ ಗಾಂಧಿ ಪ್ರತಿಮೆ ಎದುರು ಪ್ರಾಯಶ್ಚಿತ್ತ ಮಾಡಿಕೊಂಡರು.
ಅವರಿಗೆ ಮತ ಹಾಕಿ, ಹಾಕಿಸಿ ತಪ್ಪು ಮಾಡಿದ್ದೇವೆಂದು ನೊಂದು ಗಾಂಧಿ ಎದುರು ಪ್ರಾಯಶ್ಚಿತ್ತ ಮೌನ ಧರಣಿ ನಡೆಸಿದರು.
ನಯನಾ ಮೋಟಮ್ಮ ಮಾಜಿ‌ ಸಚಿವೆ ಮೋಟಮ್ಮ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು