2:11 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೈ ನಾಯಕರ ದಂಡು ಕಡಲನಗರಿಯತ್ತ: ಜ.22ರಂದು ಸಿದ್ದರಾಮಯ್ಯ ಸೇರಿದಂತೆ 40ಕ್ಕೂ ಹೆಚ್ಚು ನೇತಾರರು ಮಂಗಳೂರಿಗೆ

20/01/2023, 13:34

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲ ಸೇರಿದಂತೆ 40ಕ್ಕೂ ಹೆಚ್ಚು ನಾಯಕರು ಜನವರಿ 22ರಂದು ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

22ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಸಿದ್ದರಾಮಯ್ಯ ಸೇರಿದಂತೆ ಎಲ್ಲ ಹಿರಿಯ ಕಾಂಗ್ರೆಸ್ ನಾಯಕರುಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಇದಕ್ಕೆ ಈಗಾಗಲೇ ಭಾರಿ ಸಿದ್ದತೆ ನಡೆದಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ, ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಸೀಟುಗಳನ್ನು ಗೆಲ್ಲುವುದು ಕೂಡ ಕಾಂಗ್ರೆಸ್ ಗೆ ಅನಿವಾರ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು