5:32 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಶಾಸಕ ಡಾ. ಭರತ್ ಶೆಟ್ಟಿ

16/06/2024, 14:37

ಮಂಗಳೂರು(reporterkarnataka.com): ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್
ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ ತಮ್ಮ ತಮ್ಮ ಬಜೆಟ್ ಹೊಂದಾಣಿಕೆ ಮಾಡಿಕೊಂಡು ಸಿದ್ದವಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಆಸ್ತಿ ತೆರಿಗೆ,ಸ್ಟಾಂಪ್ ಡ್ಯೂಟಿ ಸಹಿತ ದಿನ ಬಳಕೆಯ ವಸ್ತುಗಳ ಬೆಲೆ ಸದ್ದಿಲ್ಲದೆ ಏರಿಕೆಯಾಗಿದ್ದು ಜನತೆ ಇದಕ್ಕೆ ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು