2:04 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಕ್ಯಪದವು: ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಗೆ ಸಿಡಿಲು ಬಡಿದು ಹಾನಿ

17/05/2026, 09:00

ಬಂಟ್ವಾಳ(reporterkarnata.com): ಬಂಟ್ವಾಳ ತಾಲೂಕಿನ ಕಕ್ಯಪದವು ಸಮೀಪದ ಇಳಿಯೂರು ಎಂಬಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೇ ಸುಮಾರು ರೂ 3.50 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದ ಮಹಾವಿಷ್ಣು ದೇವಳದ ಗರ್ಭಗುಡಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ.


ಶನಿವಾರ ಸಂಜೆ ಭಾರೀ ಸಿಡಿಲು ಮಿಂಚು ಸಹಿತ ಗಾಳಿ ಮಳೆಗೆ ಶಿಲಾಮಯ ಗರ್ಭಗುಡಿ ಮೇಲಿನ ಅಂತಸ್ತು ಒಡೆದಿದೆ. ಸಿಡಿಲಿನ ಅಬ್ಬರಕ್ಕೆ ಶಿಲೆಯ ತುಂಡುಗಳು ಅಂಗಣಕ್ಕೆ ಬಿದ್ದಿದ್ದು, ಸುಮಾರು ರೂ.ಒಂದೂ ಕೋಟಿಗೂ ಮಿಕ್ಕಿ ನಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ದೇವಳದ ಒಳಗೆ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ.ಕೊರೋನ ಸಂಕಷ್ಟದ ನಡುವೆ ನೂರಾರು ಮಂದಿ ಭಕ್ತರು ಶ್ರಮದಾನ ಸೇವೆ ಸಲ್ಲಿಸಿ ಕಟ್ಟಿದ ದೇವಾಲಯಕ್ಕೆ ಈ ಆಕಸ್ಮಿಕ ಹಾನಿ ಭಕ್ತರಲ್ಲಿ ಆತಂಕ ಮೂಡಿಸಿದೆ ಎಂದು ದೇವಳದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು