9:00 AM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕಕ್ಯಪದವು: ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಗೆ ಸಿಡಿಲು ಬಡಿದು ಹಾನಿ

17/05/2026, 09:00

ಬಂಟ್ವಾಳ(reporterkarnata.com): ಬಂಟ್ವಾಳ ತಾಲೂಕಿನ ಕಕ್ಯಪದವು ಸಮೀಪದ ಇಳಿಯೂರು ಎಂಬಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೇ ಸುಮಾರು ರೂ 3.50 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದ ಮಹಾವಿಷ್ಣು ದೇವಳದ ಗರ್ಭಗುಡಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ.


ಶನಿವಾರ ಸಂಜೆ ಭಾರೀ ಸಿಡಿಲು ಮಿಂಚು ಸಹಿತ ಗಾಳಿ ಮಳೆಗೆ ಶಿಲಾಮಯ ಗರ್ಭಗುಡಿ ಮೇಲಿನ ಅಂತಸ್ತು ಒಡೆದಿದೆ. ಸಿಡಿಲಿನ ಅಬ್ಬರಕ್ಕೆ ಶಿಲೆಯ ತುಂಡುಗಳು ಅಂಗಣಕ್ಕೆ ಬಿದ್ದಿದ್ದು, ಸುಮಾರು ರೂ.ಒಂದೂ ಕೋಟಿಗೂ ಮಿಕ್ಕಿ ನಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ದೇವಳದ ಒಳಗೆ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ.ಕೊರೋನ ಸಂಕಷ್ಟದ ನಡುವೆ ನೂರಾರು ಮಂದಿ ಭಕ್ತರು ಶ್ರಮದಾನ ಸೇವೆ ಸಲ್ಲಿಸಿ ಕಟ್ಟಿದ ದೇವಾಲಯಕ್ಕೆ ಈ ಆಕಸ್ಮಿಕ ಹಾನಿ ಭಕ್ತರಲ್ಲಿ ಆತಂಕ ಮೂಡಿಸಿದೆ ಎಂದು ದೇವಳದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು