9:12 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಲೆ, ಸಂಸ್ಕೃತಿ ಬೆಳೆದರೆ ಮಾತ್ರ ನಾಡಿನ ಅಭಿವೃದ್ಧಿ; ಬರೇ ಕಟ್ಟಡ, ರಸ್ತೆಯಿಂದ ಸಾಧ್ಯವಿಲ್ಲ: ಸಚಿವ ಸುನಿಲ್ ಕುಮಾರ್

17/10/2021, 11:01

ಕಾರ್ಕಳ(reporterkarnataka.com): ಪುಸ್ತಕ ಓದುವ ಹವ್ಯಾಸ ಕಡಿಮೆಯಾದರೂ, ಇದೀಗ ಮೊಬೈಲ್ ಮೂಲಕವೂ ಸಾಹಿತ್ಯವನ್ನು ಓದುವವರಿದ್ದಾರೆ. ಹೀಗಾಗಿ ಓದುವ ಸಂಸ್ಕೃತಿ ಜೀವಂತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.               

ಇಲ್ಲಿನ ಹೊಟೇಲ್ ಪ್ರಕಾಶ್‌ನ ಉತ್ಸವ ಸಭಾಂಗಣದಲ್ಲಿ ದಿ. ಪ್ರೊ.ಎಂ ರಾಮಚಂದ್ರ ವೇದಿಕೆಯಲ್ಲಿ ಸಾಹಿತ್ಯ ಸಂಘದ ಬೆಳ್ಳಿಹಬ್ಬ ವರ್ಷಾಚರಣೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ರಾಜ್ಯದ ಊರಿನ ಅಭಿವೃದ್ಧಿ ಅಂದರೆ ಅಲ್ಲಿನ ಕಟ್ಟಡ, ರಸ್ತೆ, ಸೇತುವೆ ಮಾತ್ರವಲ್ಲ. ಅಲ್ಲಿ ಕಲೆ, ಸಂಸ್ಕೃತಿ ಬೆಳೆಸುವ ಕೆಲಸ ನಡೆಯಬೇಕು. ಈ ದೃಷ್ಟಿಯಲ್ಲಿ ಸಾಹಿತ್ಯ ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು ನೀಡಿದ ಕೊಡುಗೆ ಅನನ್ಯವಾದುದು ಎಂದರು. 

ಯುವ ಸಾಹಿತಿಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಅಭಿರುಚಿ ಹೆಚ್ಚಿಸಲು ಹಾಗೂ ಜನರ ನಡುವೆ ಸಾಹಿತ್ಯವನ್ನು ಕೊಂಡೊಯ್ಯಲಾಗುವುದು ಎಂದ ಅವರು

ಭವಿಷ್ಯದ ದಿನಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಒಂದು ಸೀಮಿತ ಪ್ರದೇಶಕ್ಕೆ ಸೀಮಿತಗೊಳಿಸದೆ ಜನರ ನಡುವೆ ಕೊಂಡೊಯ್ಯುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಲಿದೆ. ಕಾರ್ಕಳ ಸಾಹಿತ್ಯ ಸಂಘದ ಪ್ರೇರಣೆ ಮತ್ತು ಮಾದರಿಯನ್ನು ಅನುಸರಿಸಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದರು. 

ರಾಜ್ಯೋತ್ಸವ ಪ್ರಶಸ್ತಿ ಬಯಸಿ ಈ ಬಾರಿ 28ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ. ಅವುಗಳಲ್ಲಿ 66 ಅರ್ಜಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅಂತಿಮ ಆಯ್ಕೆ ದೊಡ್ಡ ಸವಾಲಾಗಿದೆ ಎಂದರು.

ಮಂಗಳೂರು ಶ್ರೀ ರಾಮಕೃಷ್ಷ ಮಠದ ಸ್ವಾಮಿ ಜಿತಕಾಮಾನಂದಜೀ ಅಶಿರ್ವಚನ ನೀಡಿ ಸಮಾಜ ಬದಲಾವಣೆಯಲ್ಲಿ ಸಾಹಿತ್ಯ ಕೊಡುಗೆ ಇದೆ. ಸಾಹಿತ್ಯ ಎಂದರೆ ಆಧ್ಯಾತ್ಮವೇ ಆಗಿದೆ ಎಂದರು.  ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಸನ್ಮಾನಿಸಲಾಯಿತು.  

ಮುಂಬೈ ವಿವಿಯ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿ ಸಮಿತಿ ಅಧ್ಯಕ್ಷ ಡಾ. ಮೊಹನ್ ಆಳ್ವ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಕೆ.ಪಿ.ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು