12:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಳಾವರ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ  ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರ ಉದ್ಘಾಟನೆ 

21/10/2021, 08:54

ಕುಂದಾಪುರ(reporterkarnataka.com):  ರೈತರು ಕೃಷಿಯನ್ನು ಬಿಟ್ಟು ಹೊರಬರದಿರಲು ಸರಕಾರ ಉತ್ತಮ ಯೋಜನೆಗಳನ್ನು ರೂಪಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಬುಧವಾರ ಕಾಳಾವರದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜಗತ್ತಿಗೆ ಕರೊನಾ ಬಂದು ಎಲ್ಲರು ಮನೆಯಲ್ಲಿದ್ದಾಗ ರೈತ ಕೃಷಿ ನಡೆಸಿದ್ದಾನೆ. ಆತ ಎಲ್ಲರ ಹಾಗೇ ಕೊರೊನಾ ಎಂದು ಮನೆಯಲ್ಲಿ ಕುಳಿತಿದ್ದರೇ ಹಸಿವಿನಿಂದ ಎಷ್ಟೋ ಜನರು ಸಾಯುತ್ತಿದ್ದರು ಎಂದರು. 

ಕೃಷಿಯಲ್ಲಿ ಬರುವ ಲಾಭಕ್ಕಿಂತ ವೈಯಕ್ತಿಕ ಖರ್ಚು ಹೆಚ್ಚಾಗಿ ಜನರು ಕೃಷಿಯ ಒಲವನ್ನು ಕಳೆದುಕೊಂಡಿದ್ದಾರೆ. ಯಂತ್ರೋಪಕರಣಗಳನ್ನು ಕೃಷಿ ಚಟುವಟಿಕೆಯಲ್ಲಿ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ರೈತರು ಹಾಗೂ ಸಣ್ಣ ರೈತರಿಗೆ ಯಂತ್ರೋಪಕರಣಗಳು ಬಾಡಿಗೆಗೆ ದೊರಕುವಂತೆ ಬೇರೆ ಬೇರೆ ಭಾಗಗಳಲ್ಲಿ ಬಾಡಿಗೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ನುಡಿದರು.


ಗ್ರಾಹಕ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಕೃಷಿ ಯಂತ್ರಗಳ ಬಾಡಿಗೆ ಕೇಂದ್ರದಿಂದ ಈ ಭಾಗದ ರೈತರಿಗೆ ಹೆಚ್ಚು ಅನೂಕೂಲವಾಗುತ್ತದೆ. ಸಣ್ಣ ಮತ್ತಯ ಅತೀ ಸಣ್ಣ ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಈ ಯೋಜನೆ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಈ ಸಂದರ್ಭದಲ್ಲಿ ಜನಜಾಗೃತಿ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಹೆಚ್. ಮಂಜುನಾಥ್, ಕಾಳಾವರ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕರಾದ ರೂಪಾ ಜೆ ಮಾಡ, ಯೋಜನಾಧಿಕಾರಿ ವಸಂತ ಸಾಲ್ಯಾನ್, ಅಬ್ರಹಾಂ ಎಂ.ಕೆ., ಸ್ಥಳದಾನಿ ಸುಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕುಂದಾಪುರ ವಲಯದ ಧ.ಗ್ರಾ. ಯೋಜನೆಯ ಕೃಷಿ ಅಧಿಕಾರಿ‌ ಚೇತನ್ ಕಾರ್ಯಕ್ರಮ ನಿರೂಪಿಸಿದರು.  ಡಾ. ಎಲ್.ಹೆಚ್. ಮಂಜುನಾಥ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು