8:27 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕಲಬುರಗಿ: ಲೋಕಾಯುಕ್ತ ದಾಳಿ; ಲಂಚ ಪಡೆಯುವಾಗಲೇ ಎಎಸ್‌ಐ, ಲೇಡಿ ಕಾನ್ಸ್‌ಟೇಬಲ್ ಲಾಕ್!

07/06/2026, 19:20

ಕಲಬುರಗಿ(reporterkarnataka.com): ಪೊಲೀಸ್ ಠಾಣೆಯಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಎಎಸ್‌ಐ ಮತ್ತು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಲೋಕಾಯುಕ್ತ ಬಳಿ ಲಾಕ್​ ಆಗಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್​ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಸಿಪಿಐ ಅರುಣ್ ಕುಮಾರ್ ಮುರಗುಂಡಿ ನೇತೃತ್ವದಲ್ಲಿ ದಾಳಿ ನಡೆಸಿ ಪಿಎಸ್​ಐ ಮತ್ತು ಮಹಿಳಾ ಕಾನ್ಸ್​ಟೇಬಲ್​​​ ಅವರನ್ನು ರೆಡ್​ ಹ್ಯಾಂಡ್​ ಆಗಿ ಲಾಕ್​ ಮಾಡಿದ್ದಾರೆ.
ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್​ಸ್ಟೇಬಲ್ ಜ್ಯೋತಿ ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ವ್ಯಕ್ತಿಯೊಬ್ಬರ ಬಳಿ ಒಂದು ಸಾವಿರ ಹಣ ಪಡೆದು ಮತ್ತೆ 10 ಸಾವಿರಕ್ಕೆ ಕೊಡುವಂತೆ ಕೇಳಿದ್ದರು. ಬಳಿಕ 10 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲಾಕ್​ ಆಗಿದ್ದು, ಎಎಸ್​ಐ ಶಿವಶರಣಪ್ಪ ಮತ್ತು ಮಹಿಳಾ ಕಾನ್​ಸ್ಟೇಬಲ್​ ಜ್ಯೋತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು