1:51 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ ಕುರಿತು ಹೇಳಿದ್ದೇನು?

28/11/2021, 11:08

ಕಲಬುರಗಿ(reporterkarnataka.com): ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ಲವ್, ಸೆಕ್ಸ್, ಮೋಸದ ಆರೋಪ ಕೇಳಿ ಬಂದಿದೆ. ದೆಹಲಿ ಮೂಲದ ಯುವತಿಯೊಬ್ಬಳು ಆರೋಪ ಮಾಡಿದ್ದಾಳೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದೂರು ನೀಡಲಾಗಿದೆ.

ನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಲೋಖಂಡೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಯುವತಿ ಟ್ವೀಟ್ ಮಾಡಿದ್ದಾಳೆ. ಸಾಮಾಜಿಕ ಜಾಲತಾಣಗಳ ಮೂಲಕವೇ ಯುವತಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾಳೆ.

ಯುವತಿಯ ಟ್ವೀಟ್ ಇದೀಗ ವೈರಲ್ ಆಗಿದೆ. ಆದರೆ ಈ ಬಗ್ಗೆ ಯುವತಿ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿಲ್ಲ.

ಕಲಬುರಗಿ ಆಯುಕ್ತ ಸ್ನೇಹಲ್ ಹಾಗೂ ಯುವತಿ ನಡುವಿನ ವಾಟ್ಸಾಪ್  ಚಾಟಿಂಗ್, ಆಯುಕ್ತರ ಶರ್ಟ್ ಲೆಸ್ ಫೋಟೋ ಕೂಡ ವೈರಲ್ ಆಗಿದೆ ಎಂದು ತಿಳಿಯಲಾಗಿದೆ.

ಆಯುಕ್ತ ಸ್ನೇಹಲ್ ಈ ಕುರಿತು ಪ್ರತಿಕ್ರಿಯಿಸಿ,
‘ನನ್ನ ವಿರುದ್ಧ ಆರೋಪಿಸಿರುವ ಯುವತಿ ಯಾರೆಂದು ನನಗೆ ಗೊತ್ತಿಲ್ಲ. ಈ ಬಗ್ಗೆ ಪೊಲೀಸರಿಗೂ ನಾನು ದೂರು ನೀಡಿದ್ದೇನೆ. ನನ್ನ ಹೆಸರು ಕೆಡಿಸಲು ಈ ರೀತಿಯಾಗಿ ಮಾಡುತ್ತಿದ್ದಾರೆ. ಯುವತಿ ಜೊತೆ ನಾನು ಯಾವುದೇ ಚಾಟಿಂಗ್ ಮಾಡಿಲ್ಲ. ಫೋಟೋ ಚಾಟಿಂಗ್ ಬಗ್ಗೆಯೂ ಗೊತ್ತಿಲ್ಲ. ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ಫೋಟೋ ಎಲ್ಲಿಂದ ತೆಗೆದುಕೊಂಡರು ಎಂಬುದೂ ನನಗೆ ಗೊತ್ತಿಲ್ಲ” ಎಂದು ತಿಳಿಸಿದ್ದಾರೆ.

ಆದರೆ ಯುವತಿ ಹಾಗೂ ಪಾಲಕರು ಕಲಬುರಗಿ ಪೊಲೀಸ್ ಆಯುಕ್ತರಿಗೂ ಈ ಕುರಿತು ಮಾಹಿತಿ ನೀಡಿದ್ದಾರೆ. ಆದರೆ ಅಲ್ಲಿ ಲಿಖಿತ ದೂರು ನೀಡಿಲ್ಲ.ಘಟನೆ ದೆಹಲಿಯಲ್ಲಾಗಿರುವುದರಿಂದ ದೆಹಲಿಯಲ್ಲೇ ದೂರು ನೀಡಬೇಕು ಎಂದು ಪೊಲೀಸರು ಯುವತಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು