1:57 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Kalaburagi | ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

16/04/2025, 21:20

ಬೆಂಗಳೂರು(reporterkarnataka.com):ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಕಲಬುರಗಿಯ ಕೆಸಿಟಿ ಕಾಲೇಜು ಆವರಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ ( ಯುವ ಸಮೃದ್ದಿ ಸಮ್ಮೇಳನ) ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಈ ಹತ್ತು ವರ್ಷಗಳ ಅವರ ಅಧಿಕಾವಾಧಿಯಲ್ಲಿ ಇಪ್ಪತ್ತು ‌ಲಕ್ಷ ಉದ್ಯೋಗ ಕೊಡುವುದು ಅವರಿಗೆ ಆಗಿಲ್ಲ. ಇದು ಅವರೇ ಹೇಳಿದ ಮಾತಿದು. ಆದರೆ ಉದ್ಯೋಗ ನೀಡದೆ ಸುಳ್ಳು ಹೇಳಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ‌ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದೆವು. ಯುವ‌ನಿಧಿ ಯೋಜನೆಯಡಿಯಲ್ಲಿ ಪದವಿ ನಿರುದ್ಯೋಗಿ ಯುವಕರಿಗೆ ರೂ 2000 ಹಾಗೂ ಡಿಪ್ಲೋಮಾ ಪಾಸ್ ಆದವರಿಗೆ ರೂ 1500 ಗೌರವಧನ ( ಪ್ರತಿತಿಂಗಳು) ಎರಡು ವರ್ಷದ ಅವಧಿಯವರೆಗೆ ಕೊಡುತ್ತಿದ್ದೇವೆ.
ರಾಜ್ಯ ಸರ್ಕಾರ ಕೌಶಲ್ಯ ತರಬೇತಿ‌ ನೀಡಲು ಕೌಶಲ್ಯಾ ಅಭಿವೃದ್ದಿ‌ ಇಲಾಖೆ ತೆರೆದು ಅದರಡಿಯಲ್ಲಿ ಮಾರುಕಟ್ಟೆಯ ಬೇಡಿಕೆ ಅನ್ವಯ ತರಬೇತಿ ನೀಡಲಾಗುತ್ತಿದೆ. ಇಂದು ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಗದಿರುವವರು ನಿರಾಸೆರಾಗಬೇಡಿ ನಿಮಗೆ ಮುಂದೊಂದು ದಿನ ಉದ್ಯೋಗ ಕೊಡಿಸುತ್ತೇವೆ.
Periodic Labour Force Survey ಪ್ರಕಾರ ದೇಶದಲ್ಲಿ ಡಿಗ್ರಿ ಪಾಸಾದವರಲ್ಲಿ 18.9% ಹಾಗೂ ಡಿಪ್ಲೋಮಾ‌ ಪಾಸಾದವರಲ್ಲಿ 17.1 ನಿರುದ್ಯೋಗ ಇದೆ. ನಮ್ಮ ರಾಜ್ಯದಲ್ಲಿ 2.5% ನಿರುದ್ಯೋಗ ಇದೆ. ಇದು ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕಡಿಮೆ. ಇದಕ್ಕೆ ರಾಜ್ಯ ಸರ್ಕಾರ ಉದ್ಯೋಗ ಒದಗಿಸುವಲ್ಲಿ ಕೈಗೊಂಡ ಕ್ರಮಗಳೇ ಸಾಕ್ಷಿ.
FDA ಹೆಚ್ಚು ಹೆಚ್ಚು ಆದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುತ್ತವೆ. ಕೆಕೆ ಭಾಗದ ಕೈಗಾರಿಕೆಗಳು ಬರಬೇಕೆಂದರೆ ಹೆಚ್ಚುವರಿ 60% incentive ಕೊಡಬೇಕು ಎಂದು ಖರ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ಮಾಡಿ ಈ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಹಾಗೂ ಅಭಿವೃದ್ದಿಗೆ ಕ್ರಮ ವಹಿಸುತ್ತಿದೆ ಎಂದು ಸಿಎಂ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಇಂದು ನೇಮಕವಾದ ಹತ್ತು ಜನ ಯುವಕರಿಗೆ ನೇಮಕಾತಿ ಪತ್ರ ವಿತರಿಸಿ ಅವರಿಗೆ ಶುಭ ಹಾರೈಸಿ ಭಾಗವಹಿಸಿದ ಕಂಪನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು