12:13 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ

11/04/2022, 10:18

ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ.

ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಯು ನಡೆಯುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಸೇರಿದ್ದರು . 

ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ  ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು  ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡಿರುತ್ತಾರೆ . 

ಈ ಘಟನೆಯು ವ್ಯವಸ್ಥಿತ ಸಂಚಿನಿಂದ ನಡೆದಿರುವ ರೀತಿಯಾಗಿ ಕಂಡು ಬರುತ್ತಿದೆ. ಈ ರೀತಿಯಾಗಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಬಿತ್ತುವಂತ ಕೆಲಸವನ್ನು ಮಾಡಿ ಭಯದ ವಾತಾವರಣವನ್ನು ವಿಶ್ವ ವಿದ್ಯಾನಿಲಯದಲ್ಲಿ ಸೃಷ್ಟಿಸುವಂತ ಕೆಲಸವನ್ನು ಗೂಂಡಾ ವರ್ತನೆಯ ಈ ವಿದ್ಯಾರ್ಥಿಗಳು ಮಾಡಿರುತ್ತಾರೆ. ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್  ಖಂಡಿಸುತ್ತದೆ.  ಈ ಗೂಂಡಾ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ  ಕೂಡಲೇ ವಿಶ್ವ ವಿದ್ಯಾಲಯವು ಸೂಕ್ತವಾದ ಶಿಸ್ತು ಕ್ರಮವನ್ನು ತೆಗೆದುಕೊಳ್ಳ ಬೇಕು ಹಾಗೂ ಕಾನೂನು ಕ್ರಮಕ್ಕಾಗಿ ಮೊಕದ್ದಮೆಯನ್ನು ಹೂಡ ಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ . 

ಇತ್ತೀಚಿನ ಸುದ್ದಿ

ಜಾಹೀರಾತು