6:30 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ

11/04/2022, 10:18

ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ.

ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಯು ನಡೆಯುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಸೇರಿದ್ದರು . 

ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ  ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು  ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡಿರುತ್ತಾರೆ . 

ಈ ಘಟನೆಯು ವ್ಯವಸ್ಥಿತ ಸಂಚಿನಿಂದ ನಡೆದಿರುವ ರೀತಿಯಾಗಿ ಕಂಡು ಬರುತ್ತಿದೆ. ಈ ರೀತಿಯಾಗಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಬಿತ್ತುವಂತ ಕೆಲಸವನ್ನು ಮಾಡಿ ಭಯದ ವಾತಾವರಣವನ್ನು ವಿಶ್ವ ವಿದ್ಯಾನಿಲಯದಲ್ಲಿ ಸೃಷ್ಟಿಸುವಂತ ಕೆಲಸವನ್ನು ಗೂಂಡಾ ವರ್ತನೆಯ ಈ ವಿದ್ಯಾರ್ಥಿಗಳು ಮಾಡಿರುತ್ತಾರೆ. ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್  ಖಂಡಿಸುತ್ತದೆ.  ಈ ಗೂಂಡಾ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ  ಕೂಡಲೇ ವಿಶ್ವ ವಿದ್ಯಾಲಯವು ಸೂಕ್ತವಾದ ಶಿಸ್ತು ಕ್ರಮವನ್ನು ತೆಗೆದುಕೊಳ್ಳ ಬೇಕು ಹಾಗೂ ಕಾನೂನು ಕ್ರಮಕ್ಕಾಗಿ ಮೊಕದ್ದಮೆಯನ್ನು ಹೂಡ ಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ . 

ಇತ್ತೀಚಿನ ಸುದ್ದಿ

ಜಾಹೀರಾತು