4:04 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ

11/04/2022, 10:18

ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ.

ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಯು ನಡೆಯುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಸೇರಿದ್ದರು . 

ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ  ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು  ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡಿರುತ್ತಾರೆ . 

ಈ ಘಟನೆಯು ವ್ಯವಸ್ಥಿತ ಸಂಚಿನಿಂದ ನಡೆದಿರುವ ರೀತಿಯಾಗಿ ಕಂಡು ಬರುತ್ತಿದೆ. ಈ ರೀತಿಯಾಗಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಬಿತ್ತುವಂತ ಕೆಲಸವನ್ನು ಮಾಡಿ ಭಯದ ವಾತಾವರಣವನ್ನು ವಿಶ್ವ ವಿದ್ಯಾನಿಲಯದಲ್ಲಿ ಸೃಷ್ಟಿಸುವಂತ ಕೆಲಸವನ್ನು ಗೂಂಡಾ ವರ್ತನೆಯ ಈ ವಿದ್ಯಾರ್ಥಿಗಳು ಮಾಡಿರುತ್ತಾರೆ. ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್  ಖಂಡಿಸುತ್ತದೆ.  ಈ ಗೂಂಡಾ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ  ಕೂಡಲೇ ವಿಶ್ವ ವಿದ್ಯಾಲಯವು ಸೂಕ್ತವಾದ ಶಿಸ್ತು ಕ್ರಮವನ್ನು ತೆಗೆದುಕೊಳ್ಳ ಬೇಕು ಹಾಗೂ ಕಾನೂನು ಕ್ರಮಕ್ಕಾಗಿ ಮೊಕದ್ದಮೆಯನ್ನು ಹೂಡ ಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ . 

ಇತ್ತೀಚಿನ ಸುದ್ದಿ

ಜಾಹೀರಾತು