8:08 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್!

22/11/2021, 16:23

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ  ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ಇನ್ನು ಮೂರು ತಿಂಗಳು ಕಳೆದಿಲ್ಲ ಕಳೆದ 15 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಸಿಲುಕಿ ಚೆಕ್ ಡ್ಯಾಂ ಗೋಡೆ ಕುಸಿದು ನೀರಲ್ಲಿ ಕೊಚ್ಚಿ ಹೋಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರದ ನಾಡಲ್ಲಿ ಅಂತರ್ಜಲ ಹೆಚ್ಚಿಸಲು, ನೀರಿನ ಬವಣೆ ನೀಗಿಸಲು ಹತ್ತಾರು ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಚೆಕ್ ಡ್ಯಾಂ ಗಳ ಮೂಲಕ ನೀರು ನಿಲ್ಲಿಸೋಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಆದ್ರೆ ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಲಕ್ಷಾಂತರ ರೂಪಾಯಿ ಹಣ  ಒಂದೆ ಮಳೆಗೆ ಕಿತ್ತು ಹೋಗಿರುವುದರಿಂದ ಕಳಪೆ ಗುಣಮಟ್ಟ ಬಯಲಾಗಿದೆ.    

ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜುಲ್ಲೆಯಲ್ಲಿ ಅಂತರ್ಜಲ ವೃದ್ದಿಗಾಗಿ ಹಾಗೂ ಜಲ ಮರು ಪೂರಣಕ್ಕಾಗಿ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿ ಈ  ಕಾಮಗಾರಿಯನ್ನ ಸಣ್ಣ ನೀರಾವರಿ ಇಲಾಖೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ನಿರ್ಮಿಸೋಕೆ ಅನುಮೋದನೆ ನೀಡಿದೆ. ಆದರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳ  ನಿರ್ಲಕ್ಷ್ಯದಿಂದ ಗುತ್ತಿಗೆದಾರ ಕಳಪೆ ಕಾಮಾಗಾರಿಯಿಂದಾಗಿ  ಸೂಮಾರು 70 ಲಕ್ಷ ರೂ ವೆಚ್ಚದ ಚೆಕ್ ಡ್ಯಾಂ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಸಾವಿರಾರು  ರೈತರ ಕನಸಿಗೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರ ವಿರುದ್ದ ಹಿಡಿಶಾಪ ಹಾಕುವ ಮೂಲಕ ಸಂಬಂಧ ಪಟ್ಟ ಅಧಿಕಾರಿ ಹಾಗೂ ಗುತ್ತಿಗೆ ದಾರರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು