8:38 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್!

22/11/2021, 16:23

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ  ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ಇನ್ನು ಮೂರು ತಿಂಗಳು ಕಳೆದಿಲ್ಲ ಕಳೆದ 15 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಸಿಲುಕಿ ಚೆಕ್ ಡ್ಯಾಂ ಗೋಡೆ ಕುಸಿದು ನೀರಲ್ಲಿ ಕೊಚ್ಚಿ ಹೋಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರದ ನಾಡಲ್ಲಿ ಅಂತರ್ಜಲ ಹೆಚ್ಚಿಸಲು, ನೀರಿನ ಬವಣೆ ನೀಗಿಸಲು ಹತ್ತಾರು ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಚೆಕ್ ಡ್ಯಾಂ ಗಳ ಮೂಲಕ ನೀರು ನಿಲ್ಲಿಸೋಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಆದ್ರೆ ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಲಕ್ಷಾಂತರ ರೂಪಾಯಿ ಹಣ  ಒಂದೆ ಮಳೆಗೆ ಕಿತ್ತು ಹೋಗಿರುವುದರಿಂದ ಕಳಪೆ ಗುಣಮಟ್ಟ ಬಯಲಾಗಿದೆ.    

ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜುಲ್ಲೆಯಲ್ಲಿ ಅಂತರ್ಜಲ ವೃದ್ದಿಗಾಗಿ ಹಾಗೂ ಜಲ ಮರು ಪೂರಣಕ್ಕಾಗಿ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿ ಈ  ಕಾಮಗಾರಿಯನ್ನ ಸಣ್ಣ ನೀರಾವರಿ ಇಲಾಖೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ನಿರ್ಮಿಸೋಕೆ ಅನುಮೋದನೆ ನೀಡಿದೆ. ಆದರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳ  ನಿರ್ಲಕ್ಷ್ಯದಿಂದ ಗುತ್ತಿಗೆದಾರ ಕಳಪೆ ಕಾಮಾಗಾರಿಯಿಂದಾಗಿ  ಸೂಮಾರು 70 ಲಕ್ಷ ರೂ ವೆಚ್ಚದ ಚೆಕ್ ಡ್ಯಾಂ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಸಾವಿರಾರು  ರೈತರ ಕನಸಿಗೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರ ವಿರುದ್ದ ಹಿಡಿಶಾಪ ಹಾಕುವ ಮೂಲಕ ಸಂಬಂಧ ಪಟ್ಟ ಅಧಿಕಾರಿ ಹಾಗೂ ಗುತ್ತಿಗೆ ದಾರರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು