4:50 PM Tuesday25 - November 2025
ಬ್ರೇಕಿಂಗ್ ನ್ಯೂಸ್
Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ…

ಇತ್ತೀಚಿನ ಸುದ್ದಿ

ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್!

22/11/2021, 16:23

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ  ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ಇನ್ನು ಮೂರು ತಿಂಗಳು ಕಳೆದಿಲ್ಲ ಕಳೆದ 15 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಸಿಲುಕಿ ಚೆಕ್ ಡ್ಯಾಂ ಗೋಡೆ ಕುಸಿದು ನೀರಲ್ಲಿ ಕೊಚ್ಚಿ ಹೋಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರದ ನಾಡಲ್ಲಿ ಅಂತರ್ಜಲ ಹೆಚ್ಚಿಸಲು, ನೀರಿನ ಬವಣೆ ನೀಗಿಸಲು ಹತ್ತಾರು ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಚೆಕ್ ಡ್ಯಾಂ ಗಳ ಮೂಲಕ ನೀರು ನಿಲ್ಲಿಸೋಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಆದ್ರೆ ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಲಕ್ಷಾಂತರ ರೂಪಾಯಿ ಹಣ  ಒಂದೆ ಮಳೆಗೆ ಕಿತ್ತು ಹೋಗಿರುವುದರಿಂದ ಕಳಪೆ ಗುಣಮಟ್ಟ ಬಯಲಾಗಿದೆ.    

ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜುಲ್ಲೆಯಲ್ಲಿ ಅಂತರ್ಜಲ ವೃದ್ದಿಗಾಗಿ ಹಾಗೂ ಜಲ ಮರು ಪೂರಣಕ್ಕಾಗಿ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿ ಈ  ಕಾಮಗಾರಿಯನ್ನ ಸಣ್ಣ ನೀರಾವರಿ ಇಲಾಖೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ನಿರ್ಮಿಸೋಕೆ ಅನುಮೋದನೆ ನೀಡಿದೆ. ಆದರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳ  ನಿರ್ಲಕ್ಷ್ಯದಿಂದ ಗುತ್ತಿಗೆದಾರ ಕಳಪೆ ಕಾಮಾಗಾರಿಯಿಂದಾಗಿ  ಸೂಮಾರು 70 ಲಕ್ಷ ರೂ ವೆಚ್ಚದ ಚೆಕ್ ಡ್ಯಾಂ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಸಾವಿರಾರು  ರೈತರ ಕನಸಿಗೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರ ವಿರುದ್ದ ಹಿಡಿಶಾಪ ಹಾಕುವ ಮೂಲಕ ಸಂಬಂಧ ಪಟ್ಟ ಅಧಿಕಾರಿ ಹಾಗೂ ಗುತ್ತಿಗೆ ದಾರರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು