10:38 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್!

22/11/2021, 16:23

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ  ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ಇನ್ನು ಮೂರು ತಿಂಗಳು ಕಳೆದಿಲ್ಲ ಕಳೆದ 15 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಸಿಲುಕಿ ಚೆಕ್ ಡ್ಯಾಂ ಗೋಡೆ ಕುಸಿದು ನೀರಲ್ಲಿ ಕೊಚ್ಚಿ ಹೋಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರದ ನಾಡಲ್ಲಿ ಅಂತರ್ಜಲ ಹೆಚ್ಚಿಸಲು, ನೀರಿನ ಬವಣೆ ನೀಗಿಸಲು ಹತ್ತಾರು ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಚೆಕ್ ಡ್ಯಾಂ ಗಳ ಮೂಲಕ ನೀರು ನಿಲ್ಲಿಸೋಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಆದ್ರೆ ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಲಕ್ಷಾಂತರ ರೂಪಾಯಿ ಹಣ  ಒಂದೆ ಮಳೆಗೆ ಕಿತ್ತು ಹೋಗಿರುವುದರಿಂದ ಕಳಪೆ ಗುಣಮಟ್ಟ ಬಯಲಾಗಿದೆ.    

ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜುಲ್ಲೆಯಲ್ಲಿ ಅಂತರ್ಜಲ ವೃದ್ದಿಗಾಗಿ ಹಾಗೂ ಜಲ ಮರು ಪೂರಣಕ್ಕಾಗಿ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿ ಈ  ಕಾಮಗಾರಿಯನ್ನ ಸಣ್ಣ ನೀರಾವರಿ ಇಲಾಖೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ನಿರ್ಮಿಸೋಕೆ ಅನುಮೋದನೆ ನೀಡಿದೆ. ಆದರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳ  ನಿರ್ಲಕ್ಷ್ಯದಿಂದ ಗುತ್ತಿಗೆದಾರ ಕಳಪೆ ಕಾಮಾಗಾರಿಯಿಂದಾಗಿ  ಸೂಮಾರು 70 ಲಕ್ಷ ರೂ ವೆಚ್ಚದ ಚೆಕ್ ಡ್ಯಾಂ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಸಾವಿರಾರು  ರೈತರ ಕನಸಿಗೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರ ವಿರುದ್ದ ಹಿಡಿಶಾಪ ಹಾಕುವ ಮೂಲಕ ಸಂಬಂಧ ಪಟ್ಟ ಅಧಿಕಾರಿ ಹಾಗೂ ಗುತ್ತಿಗೆ ದಾರರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು