8:43 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ ಹರೆಯದ ಚಾಲಕ ನೀರುಪಾಲು

25/07/2025, 00:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಭದ್ರಾ ನದಿಗೆ ಬಿದ್ದ ಪರಿಣಾಮ ಚಾಲಕ ನೀರುಪಾಲಾಗಿದ್ದಾರೆ.


ಗಣಪತಿಕಟ್ಟೆ ನಿವಾಸಿ ಶಮಂತ (23) ನದಿಪಾಲಾದ ಯುವ ಚಾಲಕ ಎಂದು ತಿಳಿದು ಬಂದಿದೆ.
ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ನದಿಗೆ ಬಿದ್ದಿದೆ.ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ ಚೀಪ್ ಚಾಲಕ ಶಮಂತ ಅವರು ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಈ ದುರ್ಘಟನೆ ನಡೆದಿದೆ.
ಕಾರ್ಮಿಕರನ್ನ ಕರೆತರುವಾಗ ಅಪಘಾತವಾಗಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಸ್ಥಳಕ್ಕೆ ಕಳಸ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
ಸುರಿಯುತ್ತಿರೋ ಮಳೆಯಿಂದ ಶೋಧ ಕಾರ್ಯಾಚರಣೆಗೂ ತೊಂದರೆಯಾಗಿದೆ.
ಬಾಳೆಹೊನ್ನೂರಿನಿಂದ ಅಗ್ನಿಶಾಮಕ ಸಿಬ್ಬಂದಿಗಳನ್ನು ಕರೆಸಲಾಗಿದೆ. ಮುಳುಗು ತಜ್ಞ ಮಲ್ಪೆ ಈಶ್ವರ್ ಅವರನ್ನು ಕರೆದು ತರುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು