4:12 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಕಳಸ: ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಭಸ್ಮ; ಬೆಂಕಿ ನಂದಿಸಲು ಹರಸಾಹಸ

09/02/2025, 20:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಕರಕಲಾಗಿದೆ.
ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.


ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ. ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ಉಂಟಾಗಿದೆ.
ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ‌ ಹಿಡಿಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು