1:06 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ

23/11/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಹುಲಿಯೂರಿನ ಸರಹದ್ದು ಕೃತಿಯ ಬಗ್ಗೆ ಮಾತನಾಡಿದರು.

ಹುಲಿಯೂರಿನ ಸರಹದ್ದು ಕೃತಿಯಲ್ಲಿನ ಕಥೆಗಳು ಹಲವು ದಶಕಗಳ ಹಿಂದೆ ಬರೆದ ಕಥೆಗಳಾಗಿದ್ದರೂ ಕೂಡ ಈ ಕಥೆಗಳ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ವಿಭಿನ್ನ ಕಥಾವಸ್ತುವಿನ ಮೂಲಕ ಸಮಾಜವನ್ನು ತಿದ್ದುವ ವಿಚಾರಗಳೊಂದಿಗೆ ಈ ಕೃತಿಗಳ ಕಥೆಗಳು ಒಡಮೂಡಿವೆ ಎಂದರು.

ಅಪ್ಪಟ ಸಂಶೋಧಕನಾಗಿ, ಅನ್ವೇಷಕನಾಗಿ, ಲೇಖಕನಾಗಿ ಹಲವಾರು ಹೊಸತುಗಳಿಗೆ, ಮೊದಲುಗಳಿಗೆ ಕಾರಣರಾದವರು ತೇಜಸ್ವಿ ಅವರು. ಯುವ ಪೀಳಿಗೆಯ ಮೇಲೆ ತೇಜಸ್ವಿ ಅವರ ಪ್ರಭಾವ ಅಪಾರ. ಬದುಕಿದಂತೆ ಬರೆದ, ಬರೆದಂತೆ ಬದುಕಿದ ತೇಜಸ್ವಿ ತಮ್ಮ ಕೃತಿಗಳ ಮೂಲಕ ಜನರಿಗೆ ಹತ್ತಿರವಾದಂತೆ ತಮ್ಮ ವ್ಯಕ್ತಿತ್ವದ ಮೂಲಕವೂ ಜನಮನಕ್ಕೆ ಆಪ್ತರಾದವರು ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಲೇಖಕ ಪೂರ್ಣೆಶ್ ಮತ್ತಾವರ, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು