8:59 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ

23/11/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಹುಲಿಯೂರಿನ ಸರಹದ್ದು ಕೃತಿಯ ಬಗ್ಗೆ ಮಾತನಾಡಿದರು.

ಹುಲಿಯೂರಿನ ಸರಹದ್ದು ಕೃತಿಯಲ್ಲಿನ ಕಥೆಗಳು ಹಲವು ದಶಕಗಳ ಹಿಂದೆ ಬರೆದ ಕಥೆಗಳಾಗಿದ್ದರೂ ಕೂಡ ಈ ಕಥೆಗಳ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ವಿಭಿನ್ನ ಕಥಾವಸ್ತುವಿನ ಮೂಲಕ ಸಮಾಜವನ್ನು ತಿದ್ದುವ ವಿಚಾರಗಳೊಂದಿಗೆ ಈ ಕೃತಿಗಳ ಕಥೆಗಳು ಒಡಮೂಡಿವೆ ಎಂದರು.

ಅಪ್ಪಟ ಸಂಶೋಧಕನಾಗಿ, ಅನ್ವೇಷಕನಾಗಿ, ಲೇಖಕನಾಗಿ ಹಲವಾರು ಹೊಸತುಗಳಿಗೆ, ಮೊದಲುಗಳಿಗೆ ಕಾರಣರಾದವರು ತೇಜಸ್ವಿ ಅವರು. ಯುವ ಪೀಳಿಗೆಯ ಮೇಲೆ ತೇಜಸ್ವಿ ಅವರ ಪ್ರಭಾವ ಅಪಾರ. ಬದುಕಿದಂತೆ ಬರೆದ, ಬರೆದಂತೆ ಬದುಕಿದ ತೇಜಸ್ವಿ ತಮ್ಮ ಕೃತಿಗಳ ಮೂಲಕ ಜನರಿಗೆ ಹತ್ತಿರವಾದಂತೆ ತಮ್ಮ ವ್ಯಕ್ತಿತ್ವದ ಮೂಲಕವೂ ಜನಮನಕ್ಕೆ ಆಪ್ತರಾದವರು ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಲೇಖಕ ಪೂರ್ಣೆಶ್ ಮತ್ತಾವರ, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು