11:06 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ

23/11/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಹುಲಿಯೂರಿನ ಸರಹದ್ದು ಕೃತಿಯ ಬಗ್ಗೆ ಮಾತನಾಡಿದರು.

ಹುಲಿಯೂರಿನ ಸರಹದ್ದು ಕೃತಿಯಲ್ಲಿನ ಕಥೆಗಳು ಹಲವು ದಶಕಗಳ ಹಿಂದೆ ಬರೆದ ಕಥೆಗಳಾಗಿದ್ದರೂ ಕೂಡ ಈ ಕಥೆಗಳ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ವಿಭಿನ್ನ ಕಥಾವಸ್ತುವಿನ ಮೂಲಕ ಸಮಾಜವನ್ನು ತಿದ್ದುವ ವಿಚಾರಗಳೊಂದಿಗೆ ಈ ಕೃತಿಗಳ ಕಥೆಗಳು ಒಡಮೂಡಿವೆ ಎಂದರು.

ಅಪ್ಪಟ ಸಂಶೋಧಕನಾಗಿ, ಅನ್ವೇಷಕನಾಗಿ, ಲೇಖಕನಾಗಿ ಹಲವಾರು ಹೊಸತುಗಳಿಗೆ, ಮೊದಲುಗಳಿಗೆ ಕಾರಣರಾದವರು ತೇಜಸ್ವಿ ಅವರು. ಯುವ ಪೀಳಿಗೆಯ ಮೇಲೆ ತೇಜಸ್ವಿ ಅವರ ಪ್ರಭಾವ ಅಪಾರ. ಬದುಕಿದಂತೆ ಬರೆದ, ಬರೆದಂತೆ ಬದುಕಿದ ತೇಜಸ್ವಿ ತಮ್ಮ ಕೃತಿಗಳ ಮೂಲಕ ಜನರಿಗೆ ಹತ್ತಿರವಾದಂತೆ ತಮ್ಮ ವ್ಯಕ್ತಿತ್ವದ ಮೂಲಕವೂ ಜನಮನಕ್ಕೆ ಆಪ್ತರಾದವರು ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಲೇಖಕ ಪೂರ್ಣೆಶ್ ಮತ್ತಾವರ, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು