3:52 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕಲಬುರ್ಗಿ: ವಕ್ಫ್ ಬೋರ್ಡ್ ಸದಸ್ಯರಾಗಿ ಆಯ್ಕೆಯಾದ ಹಫೀಜ್ ಮುಹಮ್ಮದ್ ಅಲಿ ಅಲ್ ಹುಸೇನಿಗೆ ಅದ್ಧೂರಿ ಸ್ವಾಗತ

25/11/2024, 19:09

ಶಿವು ರಾಠೋಡ್ ಹುಣಸಗಿ ಕಲಬುರ್ಗಿ

info.reporterkarnataka@gmail.com

ವಕ್ಫ್ ಬೋರ್ಡ್ ಸದಸ್ಯರಾಗಿ ನೂತನವಾಗಿ ಆಯ್ಕೆಯದ ಕೆಬಿಎನ್ ದರ್ಗಾದ ಸಜ್ಜಾದೆ ನಶೀನ ಹಫೀಜ ಸಯ್ಯದ ಮುಹಮ್ಮದ್ ಅಲಿ ಅಲ್ ಹುಸ್ಸೇನಿ ಅವರನ್ನು ಕಲಬುರ್ಗಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ನಗರದ ಹುಮ್ನಾಬಾದ್ ರಿಂಗ್ ರೋಡ್ ನಲ್ಲಿ ಹೂವುಗಳಿಂದ ತುಂಬಿದ ಜೇಸಿಬಿಗಳಿಂದ ಅಲಿ ಹುಸೇನಿರಿಗೆ ಪುಷ್ಪಾರ್ಪಣೆ ನಡೆಯಿತು. ಅಲ್ಲದೇ 600 ಕೆಜಿ ಹಾಗೂ 50 ಮೀಟರ ಉದ್ದದ ಮಾಲಾರ್ಪಣೆಗೆ ನೆರೆದ ಸಮೂಹ ಸಾಕ್ಷಿಯಾಯಿತು.
ಹೂ ಮಳೆಯ ನಂತರ ಕಪನೂರ ಏರಿಯಾದ ಬಾಬಾಸಾಹೇಬ ಅಂಬೇಡ್ಕರ ಮೂರ್ತಿಗೆ ಅಲಿ ಅಲ ಹುಸ್ಸೇನಿ ಮಾಲಾರ್ಪಣೆ ಮಾಡಿದರು.

ಪುಂಜಾ ಗ್ರೂಪ್ ಆಫ್ ಇಂಡಸ್ಟ್ರಿ (ಕರಿಗಾರ ಕುಟುಂಬ),ದರ್ಗಾ ಹಜರತ್ ಬೈ ಬಿ ಕುಂಜಾ ಮಸಾಬಿ ದರ್ಗಾ, ಅಯಾಜ್ ಖಾನ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ನಯೀಮ್ ಖಾನ ಸೇರಿದಂತೆ ಅನೇಕ ಜನ ಅವರಿಗೆ ರೋಡ ಶೋ ರ್ಯಾಲಿಯಲ್ಲಿಯೇ ಸನ್ಮಾನ ಮಾಡಿ ಅಭಿನಂದಿಸಿದರು. ರೋಡ ಶೋ ಉದ್ದಕ್ಕೂ “ಅಲಿ ಹಮಾರಿ ಜಾನ್ ಹೈ, ಗುಲ್ಬರ್ಗಾ ಕಿ ಶಾನ ಹೈ ” ಎಂಬ ಜೈಕಾರ ಕೇಳಿ ಬಂತು.
ಹಫೀಜ ಮುಹಮ್ಮದ ಅಲಿ ಅಲ್ ಹುಸ್ಸೇನಿ ಇವರು ಜನರನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಸಹಸ್ರಾರು ಜನರು ಪಾಲ್ಗೊಂಡಿದ್ದ ಈ ರ್ಯಾಲಿ ಕಮಲಾಪುರದಿಂದ ಪ್ರಾರಂಭವಾಗಿ ಕಪ್ನೂರ್,ಹುಮನಾಬಾದ್ ಸರ್ಕಲ್, ನಾಗೇಶ್ವರ ಶಾಲೆ, ಮುಸ್ಲಿಂ ಚೌಕ್, ಮಕ್ಬಾರಾ ಮಸೀದಿ, ಜಲಾಲವಾಡಿ, ಕೆಬಿಎನ್ ದರ್ಗಾ. ದರ್ಗಾ ತಲುಪಿದ ನಂತರ ಖಾಜಾ ಬಂದಾನವಾಜರ ಆಶೀರ್ವಾದ ಪಡೆದ ಅಲಿ ಅಲ್ ಹುಸ್ಸೇನಿ ದೇವಡಿ ತೆರಳಿದರು. ದೇವಡಿಯಲ್ಲಿ ಭಕ್ತರು ಅನುಯಾಯಿಗಳು ಸನ್ಮಾನ ಮಾಡಿದರು. ಶಾಂತಿಯುತವಾಗಿ ನಡೆದ ರ್ಯಾಲಿಯಲ್ಲಿ ಪೊಲೀಸ್
ಬಿಗಿ ಬಂದೋಬಸ್ತ್ ಮಾಡಲಾಗಿತು.

ಇತ್ತೀಚಿನ ಸುದ್ದಿ

ಜಾಹೀರಾತು