4:11 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು