12:17 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು