1:47 AM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು