9:09 AM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು