11:48 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು