12:45 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು