7:28 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಳೆದ 1 ವರ್ಷದಿಂದ ರಾಜ್ಯ ಸರಕಾರ ಒಂದು ರೂಪಾಯಿ ಅನುದಾನ ನೀಡಿಲ್ಲ: ಮಂಗಳೂರು ಮೇಯರ್

10/09/2024, 13:17

ಮಂಗಳೂರು(reporterkarnataka.com): ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಒಂದೇ ಒಂದು ರೂಪಾಯಿ ಅನುದಾನ ಬಂದಿಲ್ಲ. ಸಚಿವ ಬೈರತಿ ಸುರೇಶ್ ಬಂದು 75 ಕೋಟಿ ರೂ. ಅನುದಾನ ಕೊಡುತ್ತೇವೆ. ಮತ್ತೊಂದು ಸಲ 75 ಕೋಟಿ ರೂ. ಅನುದಾನ ಕೊಡುತ್ತೇವೆ ಎಂದಿದ್ದಾರೆ. ಇಲ್ಲಿಯವರೆಗೂ ಸರ್ಕಾರದಿಂದ ಒಂದೇ ಒಂದು ರುಪಾಯಿ ಅನುದಾನ ಬಂದಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ವರ್ಗಾವಣೆಯಂತೂ ಸಾಕಷ್ಟು ದಂಧೆ ರೂಪದಲ್ಲಿ ನಡೆದಿದೆ. 16 ತಿಂಗಳಲ್ಲಿ ಯಾವುದೇ ವಿಶೇಷ ಅನುದಾನ ಸರ್ಕಾರ ನೀಡಲಿಲ್ಲ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಮಾಡಿದ ಯೋಜನೆಗಳ ಕಾಮಗಾರಿಯನ್ನು ಈ ಸರ್ಕಾರ ನಿಲ್ಲಿಸಿಬಿಟ್ಟಿದೆ ಎಂದು ಆರೋಪಿಸಿದರು.
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಜಾಗದ ಗೈಡ್‌ಲೈನ್ಸ್ ವ್ಯಾಲುವನ್ನು ಹೆಚ್ಚಳ ಮಾಡಿದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆಯ ಖಾಲಿ ಜಾಗಕ್ಕೆ ಹಾಕುವ ತೆರಿಗೆಯಲ್ಲಿ ಹೆಚ್ಚಳವಾಗಿರುವುದನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಜಾಗಕ್ಕೆ ಶೇ.0.20 ಇದ್ದ ತೆರಿಗೆಯನ್ನು ಶೇ.0.50ಕ್ಕೆ ಏರಿಕೆ ಮಾಡಲಾಗಿದೆ. ಆದರೆ ನಾವು ಅದನ್ನು ಶೇ.0.10ಕ್ಕೆ ಇಳಿಸಲು ಪ್ರತಿಪಕ್ಷದ ಸದಸ್ಯರ ಜತೆಗೆ ಸಭೆ ನಡೆಸಿ ನಿರ್ಧಾರಕ್ಕೆ ಬಂದಿದ್ದು, ಇದನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡುತ್ತೇವೆ. ಇದಕ್ಕೆ ಪ್ರತಿಪಕ್ಷದ ಸದಸ್ಯರು ಕೂಡ ನಮ್ಮ ಜತೆಗೆ ಬಂದು ನಗರಾಭಿವೃದ್ಧಿ ಸಚಿವ, ಇಲಾಖೆಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಸ್ವಯಂಘೋಷಿತ ಆಸ್ತಿ ತೆರಿಗೆ ಬಂದ ಬಳಿಕ ಪ್ರತಿ ವರ್ಷವೂ ಶೇ.5ರಷ್ಟು ತೆರಿಗೆ ಹೆಚ್ಚಳ ಮಾಡುವುದು ಕಾನೂನಿನಲ್ಲಿಯೇ ಇದೆ. ನಮ್ಮ ಅವಧಿಯಲ್ಲೂ 3 ವರ್ಷದಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿದ್ದೇವೆ. ಈ ಹಿಂದೆ ಎರಡು ಬಾರಿ ಕಾಂಗ್ರೆಸ್ ಅಧಿಕಾರ ಇದ್ದಾಗ ಕೂಡ ಹೆಚ್ಚಳ ಮಾಡುವ ಕೆಲಸವಾಗಿದೆ ಮೇಯರ್ ತಿಳಿಸಿದರು.
ಉಪ ಮೇಯರ್ ಸುನೀತಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ವರುಣ್ ಚೌಟ, ಲೋಹಿತ್, ಗಣೇಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು