8:34 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಸಹಕಾರಿಯಾಗಿದೆ: ಶಾಸಕ ವೇದವ್ಯಾಸ್ ಕಾಮತ್

16/12/2022, 23:40

ಮಂಗಳೂರು(reporterkarnataka.com): ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಅಗತ್ಯ ಮತ್ತು ಸಹಕಾರಿಯಾಗಿದೆ ಎಂದು ಶಾಸಕ‌ ಡಿ. ವೇದವ್ಯಾಸ್ ಕಾಮತ್ ಅಭಿಪ್ರಾಯಪಟ್ಟರು.

ನಗರದ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ನಡೆದ ನ್ಯಾಕ್ ಕುರಿತು ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ಹೆಚ್ಚಿಸಿಕೊಳ್ಳಲು ಕಾಲೇಜು ನ್ಯಾಕ್ ಪ್ರಕ್ರಿಯೆಗೆ ಒಳಪಡಬೇಕು‌. ಇದರಿಂದ ಸರಕಾರದಿಂದ ಹೆಚ್ಚಿನ ಅನುದಾನ ತರಲು ಸಹಕಾರಿಯಾಗಿದೆ. ಎಲ್ಲ ಅಧ್ಯಾಪಕರೂ ಜವಾಬ್ದಾರಿ ಹೆಚ್ಚಿಸಿಕೊಂಡು ಶ್ರಮಿಸಿ, ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆಹ್ವಾನ ನೀಡು ಕಾಲೇಜಿನ ಕುರಿತು ಸಕಾರಾತ್ಮಕ ಅಭಿಪ್ರಾಯಗಳನ್ನು ನ್ಯಾಕ್ ತಂಡದ ಮುಂದೆ ಹಂಚಿಕೊಳ್ಳಲು ತಿಳಿಸಿ ಎಂದರು.
ನ್ಯಾಕ್ ತಂಡ ಪರಿಶೀಲನೆಗೆ ಬಂದು ಹೋಗುವ ವರೆಗೂ ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಿ. ನಾವೆಲ್ಲರೂ ಜೊತೆಯಾಗಿ ಈ ಕೆಲಸ ಮಾಡೋಣ‌. ಮುಂದಿನ ದಿನಗಳಲ್ಲಿ ಕಾಲೇಜು ಎತ್ತರಕ್ಕೆ ಬೆಳೆಯಲಿ, ಸ್ನಾತಕೋತ್ತರ ಕೋರ್ಸ್ ಗಳನ್ನು ಆರಂಭಿಸಲು ಶಾಸಕರು ಕರೆ ನೀಡಿದರು‌. ಮುಂದಿನ ದಿನಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನೆರವು ನೀಡುವ‌ ಭರವಸೆ ನೀಡಿದರು.

ಸಭೆಯಲ್ಲಿ ಸಿಡಿಸಿ ಸದಸ್ಯರಾದ ಮಂಜುನಾಥ್, IQAC ಸಂಚಾಲಕರಾದ ಡಾ. ಚಂದ್ರಶೇಖರ ಕೆ. ಸಹ ಸಂಚಾಲಕ ಡಾ. ನಯನ ಎಲ್.ಎಂ, ಡಾ. ಜಗದೀಶ್ ಬಾಳ, ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು