4:41 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಸಹಕಾರಿಯಾಗಿದೆ: ಶಾಸಕ ವೇದವ್ಯಾಸ್ ಕಾಮತ್

16/12/2022, 23:40

ಮಂಗಳೂರು(reporterkarnataka.com): ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಅಗತ್ಯ ಮತ್ತು ಸಹಕಾರಿಯಾಗಿದೆ ಎಂದು ಶಾಸಕ‌ ಡಿ. ವೇದವ್ಯಾಸ್ ಕಾಮತ್ ಅಭಿಪ್ರಾಯಪಟ್ಟರು.

ನಗರದ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ನಡೆದ ನ್ಯಾಕ್ ಕುರಿತು ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ಹೆಚ್ಚಿಸಿಕೊಳ್ಳಲು ಕಾಲೇಜು ನ್ಯಾಕ್ ಪ್ರಕ್ರಿಯೆಗೆ ಒಳಪಡಬೇಕು‌. ಇದರಿಂದ ಸರಕಾರದಿಂದ ಹೆಚ್ಚಿನ ಅನುದಾನ ತರಲು ಸಹಕಾರಿಯಾಗಿದೆ. ಎಲ್ಲ ಅಧ್ಯಾಪಕರೂ ಜವಾಬ್ದಾರಿ ಹೆಚ್ಚಿಸಿಕೊಂಡು ಶ್ರಮಿಸಿ, ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆಹ್ವಾನ ನೀಡು ಕಾಲೇಜಿನ ಕುರಿತು ಸಕಾರಾತ್ಮಕ ಅಭಿಪ್ರಾಯಗಳನ್ನು ನ್ಯಾಕ್ ತಂಡದ ಮುಂದೆ ಹಂಚಿಕೊಳ್ಳಲು ತಿಳಿಸಿ ಎಂದರು.
ನ್ಯಾಕ್ ತಂಡ ಪರಿಶೀಲನೆಗೆ ಬಂದು ಹೋಗುವ ವರೆಗೂ ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಿ. ನಾವೆಲ್ಲರೂ ಜೊತೆಯಾಗಿ ಈ ಕೆಲಸ ಮಾಡೋಣ‌. ಮುಂದಿನ ದಿನಗಳಲ್ಲಿ ಕಾಲೇಜು ಎತ್ತರಕ್ಕೆ ಬೆಳೆಯಲಿ, ಸ್ನಾತಕೋತ್ತರ ಕೋರ್ಸ್ ಗಳನ್ನು ಆರಂಭಿಸಲು ಶಾಸಕರು ಕರೆ ನೀಡಿದರು‌. ಮುಂದಿನ ದಿನಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನೆರವು ನೀಡುವ‌ ಭರವಸೆ ನೀಡಿದರು.

ಸಭೆಯಲ್ಲಿ ಸಿಡಿಸಿ ಸದಸ್ಯರಾದ ಮಂಜುನಾಥ್, IQAC ಸಂಚಾಲಕರಾದ ಡಾ. ಚಂದ್ರಶೇಖರ ಕೆ. ಸಹ ಸಂಚಾಲಕ ಡಾ. ನಯನ ಎಲ್.ಎಂ, ಡಾ. ಜಗದೀಶ್ ಬಾಳ, ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು