9:58 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಲಿ ಯೋಗೀಶ್ ಸಹಚರರಿಬ್ಬರ ಬಂಧನ: ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದು, ಮಾದಕ ವಸ್ತುಗಳು ವಶ

30/07/2024, 21:50

ಮಂಗಳೂರು(reporterkarnataka.com): ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಆರೋಪಿ ಕಲಿ ಯೋಗೀಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳನ್ನು, ಮಾದಕ ವಸ್ತುಗಳಾದ ಎಂಡಿಎಂಎ ನ್ನು ಹೊಂದಿಕೊಂಡು ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸಲು ಸಂಚು ರೂಪಿಸಿ ತಿರುಗಾಡಿಕೊಂಡಿರುವ ಕುರಿತು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಫಳ್ನೀರ್ ಬಳಿಯಿಂದ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ
ಕಲಿ ಯೋಗೀಶನ ಸಹಚರರಾದ ಪೈವಳಿಕೆ ಗ್ರಾಮದ ಮೊಹಮ್ಮದ್ ಹನೀಫ್ ಅಲಿ ಮುನ್ನಾ(40), ಮುಡಿಪು ಸಮೀಪದ ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ (36) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಪಿಸ್ತೂಲ್-1, ರಿವಾಲ್ವರ್-1, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತುವಾದ ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ 10 ಲಕ್ಷ ಆಗಬಹುದು.
ಆರೋಪಿಗಳಿಬ್ಬರು ವಿದೇಶದಲ್ಲಿ ತಲೆಮರೆಸಿಕೊಂಡಿರುವ
ಕಲಿ ಯೋಗೀಶನ ಸಹಚರರಾಗಿದ್ದು, ಆರೋಪಿಗಳ ಪೈಕಿ ಮೊಹಮ್ಮದ್ ಹನೀಫ್ ಅಲಿಯಾಸ್ ಅಲಿ ಮುನ್ನಾ ಎಂಬಾತನು ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜ್ಯುವೆಲ್ಲರಿ ಶೂಟೌಟ್ ಪ್ರಕರಣ, ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜ್ಯಾರಿಯಲ್ಲಿರುತ್ತದೆ.
ಇನ್ನೋರ್ವ ಆರೋಪಿ ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ ಎಂಬಾತನ ವಿರುದ್ಧ ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ದೇವಸ್ಥಾನ ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಡಿ ಕುಲಕರ್ಣಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಸಿಸಿಬಿ ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಹರೀಶ್ ಪದವಿನಂಗಡಿ, ಎಎಸ್ಐ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು