5:44 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಲಿ ಯೋಗೀಶ್ ಸಹಚರರಿಬ್ಬರ ಬಂಧನ: ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದು, ಮಾದಕ ವಸ್ತುಗಳು ವಶ

30/07/2024, 21:50

ಮಂಗಳೂರು(reporterkarnataka.com): ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಆರೋಪಿ ಕಲಿ ಯೋಗೀಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳನ್ನು, ಮಾದಕ ವಸ್ತುಗಳಾದ ಎಂಡಿಎಂಎ ನ್ನು ಹೊಂದಿಕೊಂಡು ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸಲು ಸಂಚು ರೂಪಿಸಿ ತಿರುಗಾಡಿಕೊಂಡಿರುವ ಕುರಿತು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಫಳ್ನೀರ್ ಬಳಿಯಿಂದ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ
ಕಲಿ ಯೋಗೀಶನ ಸಹಚರರಾದ ಪೈವಳಿಕೆ ಗ್ರಾಮದ ಮೊಹಮ್ಮದ್ ಹನೀಫ್ ಅಲಿ ಮುನ್ನಾ(40), ಮುಡಿಪು ಸಮೀಪದ ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ (36) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಪಿಸ್ತೂಲ್-1, ರಿವಾಲ್ವರ್-1, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತುವಾದ ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ 10 ಲಕ್ಷ ಆಗಬಹುದು.
ಆರೋಪಿಗಳಿಬ್ಬರು ವಿದೇಶದಲ್ಲಿ ತಲೆಮರೆಸಿಕೊಂಡಿರುವ
ಕಲಿ ಯೋಗೀಶನ ಸಹಚರರಾಗಿದ್ದು, ಆರೋಪಿಗಳ ಪೈಕಿ ಮೊಹಮ್ಮದ್ ಹನೀಫ್ ಅಲಿಯಾಸ್ ಅಲಿ ಮುನ್ನಾ ಎಂಬಾತನು ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜ್ಯುವೆಲ್ಲರಿ ಶೂಟೌಟ್ ಪ್ರಕರಣ, ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜ್ಯಾರಿಯಲ್ಲಿರುತ್ತದೆ.
ಇನ್ನೋರ್ವ ಆರೋಪಿ ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ ಎಂಬಾತನ ವಿರುದ್ಧ ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ದೇವಸ್ಥಾನ ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಡಿ ಕುಲಕರ್ಣಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಸಿಸಿಬಿ ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಹರೀಶ್ ಪದವಿನಂಗಡಿ, ಎಎಸ್ಐ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು