9:25 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್ ಸೀಟು ಪಡೆದ ಕತೆ!!

07/09/2024, 18:31

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ತೊಟ್ಟಿಲು ತೂಗಿದ ಕೈಗಳು ಇಡೀ ದೇಶವನ್ನೇ ಆಳ್ವಿಕೆ ಮಾಡಿದ ಉದಾಹರಣೆ ನಮ್ಮುಂದೆ ಇರುವಾಗ ಛಲವೊಂದಿದ್ದರೆ, ಏನನ್ನೂ ಸಾಧಿಸಬಹುದು ಎನ್ನುವುದು ಮತ್ತಷ್ಟು ಸ್ಷಷ್ಟ. ಇದಕ್ಕೊಂದು ನಮ್ಮ ನಿಮ್ಮ ನಡುವಿನ ಹುಡ್ಗಿಯೊಬ್ಬಳು ನಿದರ್ಶನ.
ಮಂಗಳೂರು ಹೊರವಲಯದ ಕೊಣಾಜೆ ಮುಟಿಂಜ ನಿವಾಸಿ ಪದ್ಮನಾಭ ಬಂಗೇರ ಹಾಗೂ ನೀರಜಾ ಅವರ ಪುತ್ರಿ ತನ್ವಿ ಛಲದಿಂದ ಗೆದ್ದಾಕೆ.ತನ್ವಿ ತಾಯಿ ಖಾಸಗಿ ಏಜೆನ್ಸಿಯಲ್ಲಿ ಅಕೌಂಟೆಂಟ್, ತಂದೆ ಮೇಸ್ತ್ರಿ. ಆರ್ಥಿಕವಾಗಿ ಅಷ್ಟೇನು ಗಟ್ಟಿಗರಲ್ಲ. ಆದರೆ ಪ್ರತಿಭೆ ಆ ಹುಡುಗಿಗೆ ಬೆನ್ನೆಲುಬು ತರಹ ಸಹಾಯ ಮಾಡಿತು. ಎಸ್‌ಎಸ್‌ಎಲ್‌ಸಿಯಲ್ಲಿ 613 ಅಂಕ, ಪಿಯುಸಿಯಲ್ಲಿ 575 ಅಂಕ ಪಡೆದವಳಾಕೆ. ವೈದ್ಯೆಯಾಗುವ ಕನಸು ಕಂಡಿದ್ದಳು. ಮಗಳು ವೈದ್ಯೆಯಾಗಬೇಕು ಎಂಬುದು ಪೋಷಕರ ಕನಸು ಕೂಡ ಆಗಿತ್ತು. ಆದರೆ ಲಕ್ಷಗಟ್ಟಲೆ ಶುಲ್ಕ ಪಾವತಿಸಿ ಎಂಬಿಬಿಎಸ್ ಓದುವುದು ಅವರಿಗೆ ಕನಸಿನ ಮಾತಾಗಿತ್ತು. ಈ ನಡುವೆ ಕಳೆದ ವರ್ಷದ ನೀಟ್ (NEET) ಪರೀಕ್ಷೆಯಲ್ಲಿ ಆಕೆ 720ಕ್ಕೆ 457 ಅಂಕಗಳನ್ನು ಗಳಿಸಿ 1,55,670 ರ್ಯಾಂಕ್ ಪಡೆದಿದ್ದಳು. ಈ ಶ್ರೇಣಿಯಲ್ಲಿ ಆಕೆ ಎಂಬಿಬಿಎಸ್ ಸೀಟು ಪಡೆದಿದ್ದರೂ, ಲಕ್ಷಾಂತರ ಶುಲ್ಕವನ್ನು ಪಾವತಿಸಬೇಕಾಗಿತ್ತು. ಈ ವೇಳೆ ಪೋಷಕರು ತನ್ವಿಗೆ ನರ್ಸಿಂಗ್ ಓದುವುದೇ ಸೂಕ್ತ ಎಂದು ನಿರ್ಧರಿಸಿದ್ದರು. ಆದರೆ ವೈದ್ಯಳಾಗುವ ಕನಸಿಗೆ ಮಾತ್ರ ಹಿಂದೆ ಸರಿಯಲಿಲ್ಲ. ಅಷ್ಟರಲ್ಲಿ ನಾನೇಕೆ ನೀಟ್ ಓದಿ ಮತ್ತೆ ಎಂಬಿಬಿಎಸ್ ಸೀಟು ಪಡೆಯಬಾರದು ಎಂದು ಹಠಕ್ಕೆ ಬಿದ್ದಳು. ಮಂಗಳೂರಿನಲ್ಲಿ ಎಂಬಿಬಿಎಸ್ ಸೀಟು ಪಡೆಯಬೇಕೆಂದು ಹಠಕ್ಕೆ ಬಿದ್ದು ಯೆನೆಪೊಯದಲ್ಲಿ ಉಚಿತ ಕೋಚಿಂಗ್ ಪಡೆದು ಈ ವರ್ಷ ನೀಟ್ ನಲ್ಲಿ 720ರಲ್ಲಿ 647 (28,782 ಆಲ್ ಇಂಡಿಯಾ ರ್ಯಾಂಕ್) ಗಳಿಸಿದ್ದಾಳೆ. ಮಂಗಳೂರು ಕೆಎಂಸಿಯಲ್ಲಿ ಎಂಬಿಬಿಎಸ್ ಸೀಟು ಪಡೆದು ವಿದ್ಯಾರ್ಥಿಗಳಿಗೆ ಮಾದರಿ ಎನಿಸಿದ್ದಾಳೆ. ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ತನ್ವಿಯ ಮುಂದಿನ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು